ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ.
ಹುಲಿ ದಾಳಿಯಿಂದ ಹಸು ತೀವ್ರವಾಗಿ ಗಾಯಗೊಂಡಿದೆ. ಹುಲಿ ದಾಳಿಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗೋಪಾಲಯ್ಯ ನೇತೃತ್ವದಲ್ಲಿ ರಸ್ತೆ ತಡೆದು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಠಾಣಾ ಪೋಲಿಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸುತ್ತಿದ್ದು, ಹುಲಿ ಪತ್ತೆಯಾಗಿಲ್ಲ.
ಆರ್ಎಫ್ಒ ನಂದಕುಮಾರ್ ಸ್ಥಳಕ್ಕೆ ಆಗಮಿಸಿ, ಗಾಯಗೊಂಡಿರುವ ಹಸುವಿನ ಚಿಕಿತ್ಸೆಗೆ ಪರಿಹಾರವನ್ನು ನೀಡಲಾಗುವುದು. ಹುಲಿ ಸೆರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…