ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್ನ ಬಿ.ವಿಲೇಜ್ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ.
ಟಿಬೆಟ್ ಕ್ಯಾಂಪ್ ಬಿ.ವಿಲೇಜ್ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ ಬಲಿಯಾಗಿದ್ದು, ಮೇಯಲು ಬಿಟ್ಟಿದ್ದ ವೇಳೆ ಈ ಘಟನೆ ನಡೆದಿದೆ. ದಾಳಿ ವೇಳೆ ಟಿಬೆಟಿಯನ್ನರ ಕೂಗಾಟ ಕೇಳಿ ಹುಲಿ ಹಸುವಿನ ಮೃತದೇಹವನ್ನು ಬಿಟ್ಟು ಕಾಲ್ಕಿತ್ತಿದೆ. ಸ್ಥಳಕ್ಕೆ ವೀರನಹೊಸಳ್ಳಿ ವನ್ಯಜೀವಿ ವಲಯದ ಆರ್ಎಫ್ಒ ವಿನೋದ್ಗೌಡ, ಡಿಆರ್ಎಫ್ಒ ಸಹನಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದರು.
ವರ್ಷದ ಹಿಂದಷ್ಟೇ ಹುಣಸೇಕಟ್ಟೆ ಹಳ್ಳದ ಕುರುಚಲು ಕಾಡಿನಲ್ಲಿ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಆದಿವಾಸಿ ಯುವಕನನ್ನು ಕೊಂದಿದ್ದ ಸ್ಥಳದ ಹತ್ತಿರದ ಟಿಬೆಟ್ ಕ್ಯಾಂಪಿನಲ್ಲಿ ಮತ್ತೆ ಹುಲಿ ಕಾಣಿಸಿಕೊಂಡು, ಹಸುವನ್ನು ಕೊಂದುಹಾಕಿದೆ. ಇದೀಗ ಹೊಸೂರು ಕೊಡಗು ಕಾಲೋನಿ,ಗುರುಪುರ ಹಾಗೂ ನಾಗಾಪುರ ಪುನರ್ವಸತಿ ಕೇಂದ್ರದ ಜನರು ಹಾಗೂ ಟಿಬೆಟಿಯನ್ನರು ಮತ್ತೆ ಹುಲಿ ಕಾಣಿಸಿಕೊಂಡಿರುವುದರಿಂದ ಆತಂಕಗೊಂಡಿದ್ದು, ಹುಲಿ ಸೆರೆಗೆ ಒತ್ತಾಯಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…