ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್ನ ಬಿ.ವಿಲೇಜ್ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ.
ಟಿಬೆಟ್ ಕ್ಯಾಂಪ್ ಬಿ.ವಿಲೇಜ್ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ ಬಲಿಯಾಗಿದ್ದು, ಮೇಯಲು ಬಿಟ್ಟಿದ್ದ ವೇಳೆ ಈ ಘಟನೆ ನಡೆದಿದೆ. ದಾಳಿ ವೇಳೆ ಟಿಬೆಟಿಯನ್ನರ ಕೂಗಾಟ ಕೇಳಿ ಹುಲಿ ಹಸುವಿನ ಮೃತದೇಹವನ್ನು ಬಿಟ್ಟು ಕಾಲ್ಕಿತ್ತಿದೆ. ಸ್ಥಳಕ್ಕೆ ವೀರನಹೊಸಳ್ಳಿ ವನ್ಯಜೀವಿ ವಲಯದ ಆರ್ಎಫ್ಒ ವಿನೋದ್ಗೌಡ, ಡಿಆರ್ಎಫ್ಒ ಸಹನಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದರು.
ವರ್ಷದ ಹಿಂದಷ್ಟೇ ಹುಣಸೇಕಟ್ಟೆ ಹಳ್ಳದ ಕುರುಚಲು ಕಾಡಿನಲ್ಲಿ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಆದಿವಾಸಿ ಯುವಕನನ್ನು ಕೊಂದಿದ್ದ ಸ್ಥಳದ ಹತ್ತಿರದ ಟಿಬೆಟ್ ಕ್ಯಾಂಪಿನಲ್ಲಿ ಮತ್ತೆ ಹುಲಿ ಕಾಣಿಸಿಕೊಂಡು, ಹಸುವನ್ನು ಕೊಂದುಹಾಕಿದೆ. ಇದೀಗ ಹೊಸೂರು ಕೊಡಗು ಕಾಲೋನಿ,ಗುರುಪುರ ಹಾಗೂ ನಾಗಾಪುರ ಪುನರ್ವಸತಿ ಕೇಂದ್ರದ ಜನರು ಹಾಗೂ ಟಿಬೆಟಿಯನ್ನರು ಮತ್ತೆ ಹುಲಿ ಕಾಣಿಸಿಕೊಂಡಿರುವುದರಿಂದ ಆತಂಕಗೊಂಡಿದ್ದು, ಹುಲಿ ಸೆರೆಗೆ ಒತ್ತಾಯಿಸಿದ್ದಾರೆ.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…