ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್ನ ಬಿ.ವಿಲೇಜ್ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ.
ಟಿಬೆಟ್ ಕ್ಯಾಂಪ್ ಬಿ.ವಿಲೇಜ್ನ ಪೆರಿಡಾನ್ ಎಂಬವರಿಗೆ ಸೇರಿದ ಸುಮಾರು ಒಂದು ಲಕ್ಷ ರೂ. ಬೆಲೆ ಬಾಳುವ ಜರ್ಸಿ ಹಸು ಹುಲಿ ದಾಳಿಗೆ ಬಲಿಯಾಗಿದ್ದು, ಮೇಯಲು ಬಿಟ್ಟಿದ್ದ ವೇಳೆ ಈ ಘಟನೆ ನಡೆದಿದೆ. ದಾಳಿ ವೇಳೆ ಟಿಬೆಟಿಯನ್ನರ ಕೂಗಾಟ ಕೇಳಿ ಹುಲಿ ಹಸುವಿನ ಮೃತದೇಹವನ್ನು ಬಿಟ್ಟು ಕಾಲ್ಕಿತ್ತಿದೆ. ಸ್ಥಳಕ್ಕೆ ವೀರನಹೊಸಳ್ಳಿ ವನ್ಯಜೀವಿ ವಲಯದ ಆರ್ಎಫ್ಒ ವಿನೋದ್ಗೌಡ, ಡಿಆರ್ಎಫ್ಒ ಸಹನಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದರು.
ವರ್ಷದ ಹಿಂದಷ್ಟೇ ಹುಣಸೇಕಟ್ಟೆ ಹಳ್ಳದ ಕುರುಚಲು ಕಾಡಿನಲ್ಲಿ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಆದಿವಾಸಿ ಯುವಕನನ್ನು ಕೊಂದಿದ್ದ ಸ್ಥಳದ ಹತ್ತಿರದ ಟಿಬೆಟ್ ಕ್ಯಾಂಪಿನಲ್ಲಿ ಮತ್ತೆ ಹುಲಿ ಕಾಣಿಸಿಕೊಂಡು, ಹಸುವನ್ನು ಕೊಂದುಹಾಕಿದೆ. ಇದೀಗ ಹೊಸೂರು ಕೊಡಗು ಕಾಲೋನಿ,ಗುರುಪುರ ಹಾಗೂ ನಾಗಾಪುರ ಪುನರ್ವಸತಿ ಕೇಂದ್ರದ ಜನರು ಹಾಗೂ ಟಿಬೆಟಿಯನ್ನರು ಮತ್ತೆ ಹುಲಿ ಕಾಣಿಸಿಕೊಂಡಿರುವುದರಿಂದ ಆತಂಕಗೊಂಡಿದ್ದು, ಹುಲಿ ಸೆರೆಗೆ ಒತ್ತಾಯಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…