ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್ರಿಗೆ ಸೇರಿದ ಹಸುವನ್ನು ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಕೆಲಭಾಗ ತಿಂದು ಹಾಕಿದೆ. ಬುಧವಾರ ಗುರುಪುರದ ಹುಣಸೆಕಟ್ಟೆ ಹಳ್ಳದಲ್ಲಿ ಗುರುವಾರ ಹೆಮಿಗೆಯಲ್ಲಿ ಹುಲಿದಾಳಿ, ಸದ್ಯಕ್ಕೆ ಹನಗೋಡು ಭಾಗದಲ್ಲಿ ಹುಲಿ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಲಯದ ಆರ್ ಎಫ್ಓ ಸುಬ್ರಹ್ಮಣ್ಯ, ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿ: ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್ ; ರೈತರ ಆಕ್ರೋಶ
ಹೆಮ್ಮಿಗೆ ಸುತ್ತಮುತ್ತ ಹುಲಿ ಓಡಾಡುತ್ತಿದ್ದು, ಅನೇಕರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಲೇ ಇದ್ದರೂ ಹುಲಿ ಪತ್ತೆಯಾಗುತ್ತಿಲ್ಲ, ಇನ್ನಾದರೂ ವೈಜ್ಞಾನಿಕವಾಗಿ ಕಾರ್ಯಾಚರಣೆ ಕೈಗೊಂಡು ಹುಲಿ ಸೆರೆ ಹಿಡಿಯುವಂತೆ ಗ್ರಾಪಂ ಅಧ್ಯಕ್ಷ ಹೆಮ್ಮಿಗೆ ಪಾಪಣ್ಣ ಒತ್ತಾಯಿಸಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…