ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್ರಿಗೆ ಸೇರಿದ ಹಸುವನ್ನು ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಕೆಲಭಾಗ ತಿಂದು ಹಾಕಿದೆ. ಬುಧವಾರ ಗುರುಪುರದ ಹುಣಸೆಕಟ್ಟೆ ಹಳ್ಳದಲ್ಲಿ ಗುರುವಾರ ಹೆಮಿಗೆಯಲ್ಲಿ ಹುಲಿದಾಳಿ, ಸದ್ಯಕ್ಕೆ ಹನಗೋಡು ಭಾಗದಲ್ಲಿ ಹುಲಿ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಲಯದ ಆರ್ ಎಫ್ಓ ಸುಬ್ರಹ್ಮಣ್ಯ, ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿ: ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್ ; ರೈತರ ಆಕ್ರೋಶ
ಹೆಮ್ಮಿಗೆ ಸುತ್ತಮುತ್ತ ಹುಲಿ ಓಡಾಡುತ್ತಿದ್ದು, ಅನೇಕರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಲೇ ಇದ್ದರೂ ಹುಲಿ ಪತ್ತೆಯಾಗುತ್ತಿಲ್ಲ, ಇನ್ನಾದರೂ ವೈಜ್ಞಾನಿಕವಾಗಿ ಕಾರ್ಯಾಚರಣೆ ಕೈಗೊಂಡು ಹುಲಿ ಸೆರೆ ಹಿಡಿಯುವಂತೆ ಗ್ರಾಪಂ ಅಧ್ಯಕ್ಷ ಹೆಮ್ಮಿಗೆ ಪಾಪಣ್ಣ ಒತ್ತಾಯಿಸಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…