ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್ರಿಗೆ ಸೇರಿದ ಹಸುವನ್ನು ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಕೆಲಭಾಗ ತಿಂದು ಹಾಕಿದೆ. ಬುಧವಾರ ಗುರುಪುರದ ಹುಣಸೆಕಟ್ಟೆ ಹಳ್ಳದಲ್ಲಿ ಗುರುವಾರ ಹೆಮಿಗೆಯಲ್ಲಿ ಹುಲಿದಾಳಿ, ಸದ್ಯಕ್ಕೆ ಹನಗೋಡು ಭಾಗದಲ್ಲಿ ಹುಲಿ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಲಯದ ಆರ್ ಎಫ್ಓ ಸುಬ್ರಹ್ಮಣ್ಯ, ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿ: ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್ ; ರೈತರ ಆಕ್ರೋಶ
ಹೆಮ್ಮಿಗೆ ಸುತ್ತಮುತ್ತ ಹುಲಿ ಓಡಾಡುತ್ತಿದ್ದು, ಅನೇಕರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಲೇ ಇದ್ದರೂ ಹುಲಿ ಪತ್ತೆಯಾಗುತ್ತಿಲ್ಲ, ಇನ್ನಾದರೂ ವೈಜ್ಞಾನಿಕವಾಗಿ ಕಾರ್ಯಾಚರಣೆ ಕೈಗೊಂಡು ಹುಲಿ ಸೆರೆ ಹಿಡಿಯುವಂತೆ ಗ್ರಾಪಂ ಅಧ್ಯಕ್ಷ ಹೆಮ್ಮಿಗೆ ಪಾಪಣ್ಣ ಒತ್ತಾಯಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…