ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.
ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್ರಿಗೆ ಸೇರಿದ ಹಸುವನ್ನು ಹೊಲದಲ್ಲಿ ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು ಕೆಲಭಾಗ ತಿಂದು ಹಾಕಿದೆ. ಬುಧವಾರ ಗುರುಪುರದ ಹುಣಸೆಕಟ್ಟೆ ಹಳ್ಳದಲ್ಲಿ ಗುರುವಾರ ಹೆಮಿಗೆಯಲ್ಲಿ ಹುಲಿದಾಳಿ, ಸದ್ಯಕ್ಕೆ ಹನಗೋಡು ಭಾಗದಲ್ಲಿ ಹುಲಿ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಲಯದ ಆರ್ ಎಫ್ಓ ಸುಬ್ರಹ್ಮಣ್ಯ, ಸಿಬ್ಬಂದಿ ಭೇಟಿ ಮಾಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿ: ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್ ; ರೈತರ ಆಕ್ರೋಶ
ಹೆಮ್ಮಿಗೆ ಸುತ್ತಮುತ್ತ ಹುಲಿ ಓಡಾಡುತ್ತಿದ್ದು, ಅನೇಕರಿಗೆ ಕಾಣಿಸಿಕೊಂಡಿದೆ. ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಲೇ ಇದ್ದರೂ ಹುಲಿ ಪತ್ತೆಯಾಗುತ್ತಿಲ್ಲ, ಇನ್ನಾದರೂ ವೈಜ್ಞಾನಿಕವಾಗಿ ಕಾರ್ಯಾಚರಣೆ ಕೈಗೊಂಡು ಹುಲಿ ಸೆರೆ ಹಿಡಿಯುವಂತೆ ಗ್ರಾಪಂ ಅಧ್ಯಕ್ಷ ಹೆಮ್ಮಿಗೆ ಪಾಪಣ್ಣ ಒತ್ತಾಯಿಸಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…