ಮೈಸೂರು

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಭೆಯಲ್ಲಿ ಹಾಜರಿದ್ದ ನಾಮನಿರ್ದೇಶಿತ ಸದಸ್ಯ ಎಸ್. ಸುರೇಶ್ ಕುಮಾರ್ ಜೈನ್ ಹಾಗೂ ಸುಬಾನ್ ಅವರು ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು .ಜಿಲ್ಲಾಧಿಕಾರಿಗಳು ಸಮಸ್ಯೆಗಳನ್ನು ಆಲಿಸಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಮುದಾಯದವರು ವಾಸಿಸುವ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ಅವರು ದಾಳಿ ನಡೆಸಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಪ್ರಕರಣ ದಾಖಲಿಸುವಂತೆ ತಿಳಿಸಿದರು.

ಇದನ್ನು ಓದಿ: ಈ ದಿನ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಇದರೊಂದಿಗೆ ಮಾದಕ ವಸ್ತುಗಳ ಮಾರಾಟ, ಸಂಚಾರಿ ನಿಯಮ ಪಾಲನೆ ಮಾಡದೆ ವಾಹನ ಚಾಲನೆ ಮಾಡುವುದು, ವೀಲಿಂಗ್ ಮಾಡಿ ವಾಹನ ಚಾಲನೆ ಮಾಡುವುದು ಕುರಿತಂತೆ ಪರಿಶೀಲನೆ ನಡೆಸುವಂತೆ ಪೊಲೀಸ್ ಅಯುಕ್ತರಿಗೆ ಪತ್ರ ಬರೆಯುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜೈನ್ ಸಮುದಾಯ ವಾಸಿಸುವ ಸ್ಥಳದಲ್ಲಿ ಸರ್ಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ವಿವಿಧ ಇಲಾಖೆಗಳಿಂದ ದೊರಕುವ ಸೌಲಭ್ಯಗಳ ಬಗ್ಗೆ ತಿಳಿಸಿ, ಸರ್ಕಾರದ ಯೋಜನೆ ಪಡೆದುಕೊಳ್ಳಲು ಅನುವಾಗುವಂತೆ ಶಿಬಿರ ಆಯೋಜಿಸಿ ಅರ್ಹರಿಗೆ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ತಿಳಿಸಬೇಕು ಎಂದರು.ಮೈಸೂರು ನಗರದಲ್ಲಿ ಜೈನ್ ಸಮುದಾಯದವರಿಗೆ ಸ್ಮಾಶನಕ್ಕೆ ಸ್ಥಳದ ಬಗ್ಗೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಮೈಸೂರು ತಹಶೀಲ್ದಾರ್ ಅವರಿಗೆ ಪತ್ರ ಬರೆಯುವಂತೆ ಹಾಗೂ ಬನುಮಯ್ಯ ಕಾಲೇಜು ಬಳಿ ಇರುವ ಜೈನ್ ದೇವಾಲಯದ ಸುತ್ತಳತೆ ಗುರುತಿಸಿಕೊಡಲು ಜಿಲ್ಲೆಯ ಭೂ ದಾಖಲೆಗಳ ಉಪನಿರ್ದೇಶಕರಿಗೆ ಪತ್ರ ಬರೆಯುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿಲ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago