ಮೈಸೂರು

ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ: ಹೆಚ್.ಟಿ ಮಂಜು

ಮಂಡ್ಯ: ಪೌತಿ ಖಾತಾ ಆಂದೋಲನ, ಮೋಜಿಣಿ, ಆರ್.ಟಿ.ಸಿ ತಿದ್ದುಪಡಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಲಾಗುತ್ತದೆ. ಕಾರ್ಯಕ್ರಮ ಆಯೋಜನೆಗೂ ಮುನ್ನ ಕಾರ್ಯಕ್ರಮದ ಉಪಯುಕ್ತತೆಯ ಬಗ್ಗೆ ಜಾಗೃತಿ ಮೂಡಿಸಿ. ಇದರಿಂದ ಹೆಚ್ಚು ಜನರು ಭಾಗವಹಿಸಿ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತಾರೆ ಎಂದು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ ಮಂಜು ಅಭಿಪ್ರಾಯಪಟ್ಟರು.

ಅವರು ಇಂದು‌ ಬೂಕನಕೆರೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ಹಾಗೂ ಗ್ರಾಮೀಣ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಜನಸ್ಪಂದನ/ ಜನತಾ ದರ್ಶನವನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಪ್ರತಿಯೊಂದು ಅರ್ಜಿಯ ವಿವರವನ್ನು ಐ.ಪಿ.ಜಿ.ಆರ್.ಎಸ್ ತಂತ್ರಾಂಶದಲ್ಲಿ ನಮೂದಿಸಿ ಸಂಬಂಧಿಸಿದ ಇಲಾಖೆಗೆ ಕಳುಹಿಸಿಕೊಡಲಾಗುವುದು. ಎಲ್ಲಾ ಅರ್ಜಿಗಳ ವಿಲೇವಾರಿ ಕುರಿತು ಸರ್ಕಾರದ ಕಾರ್ಯದರ್ಶಿಗಳು ನಿಗಾ ವಹಿಸುತ್ತಾರೆ ಎಂದರು.

ರೈತರು ಅಥವಾ ಜನಸಮಾನ್ಯರು ಕರೆ ಮಾಡಿದಾಗ ಜಿಲ್ಲಾಧಿಕಾರಿಗಳು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುತ್ತಾರೆ. ಒಂದು ವೇಳೆ ಕಾನೂನು ವ್ಯಾಪ್ತಿಯಲ್ಲಿ ಬರದಿದ್ದರೆ ಮನವರಿಕೆ ಮಾಡಿಕೊಡುತ್ತಾರೆ. ಇವರ ಕಾರ್ಯವೈಖರಿ ಶ್ಲಾಘನೀಯ. ಅಧಿಕಾರಿಗಳು ಸಹ ಜನಸಮಾನ್ಯರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಜನರು ತಮ್ಮ ಕುಂದು ಕೊರತೆ, ಸಮಸ್ಯೆಗಳನ್ನು ಪರಿಹರಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹೋಬಳಿ ಹಾಗೂ ಗ್ರಾಮಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಜನತಾ ದರ್ಶನ ಜನರು ತಮ್ಮ ಕುಂದು ಕೊರತೆ ಅರ್ಜಿ ಸಲ್ಲಿಸಲು ಉತ್ತಮ ವೇದಿಕೆ ಎಂದರು.

ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಶೇ 100 ರಷ್ಟು ಅರ್ಜಿಗಳಿಗೂ ಪರಿಹಾರ ನೀಡುತ್ತೇವೆ ಎಂದು ಹೇಳಲು ಸಾಧ್ಯವಿಲ್ಲ. ಕಾನೂನು ಪರಿಮಿತಿಯಲ್ಲಿರುವ ಕುಂದುಕೊರತೆಗಳಿಗೆ 10 ದಿನದ ಒಳಗಾಗಿ ಪರಿಹಾರ ಒದಗಿಸಲಾಗುವುದು ಎಂದರು.

ಬೆಳೆ ವಿಮೆ ರೈತರಿಗೆ ಹೆಚ್ಚು ಉಪಯುಕ್ತವಾಗಿದ್ದು, ನೊಂದಣಿ ಮಾಡಿಕೊಳ್ಳಲು ಜುಲೈ 17 ಕೊನೆಯ ದಿನಾಂಕವಾಗಿರುತ್ತದೆ. ರೈತರು ತಪ್ಪದೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ ನೊಂದಣಿ ಮಾಡಿಕೊಳ್ಳಿ ಎಂದು ಹೇಳಿದರು.

ಆರ್.ಟಿ.ಸಿ ಗಳಿಗೆ ಆಧಾರ್ ಸೀಡಿಂಗ್ ಮಾಡುವುದರಿಂದ ಸರ್ಕಾರದ ಯೋಜನೆಗಳನ್ನು ತಲುಪಿಸಲು ಉಪಯುಕ್ತವಾಗುತ್ತದೆ. ರೈತರು ತಮ್ಮ ವ್ಯಾಪ್ತಿಯ ಆರ್. ಐ ಗಳನ್ನು ಸಂಪರ್ಕಿಸಿ ಆರ್.ಟಿ.ಸಿ ಗೆ ಆಧಾರ್ ಜೋಡಣೆ ಮಾಡಿಕೊಳ್ಳಿ. ಕೆ‌.ಆರ್.ಪೇಟೆ ತಾಲ್ಲೂಕಿನಲ್ಲಿ 3,60,000 ಆರ್.ಟಿ.ಸಿ ಗಳಿದ್ದು, 1,50,000 ಆಧಾರ್ ಸೀಡಿಂಗ್ ಆಗಿರುತ್ತದೆ. 15,000 ಮೃತ ಪಟ್ಟ ರೈತರ ವರಸುದಾರರಿಗೆ ಪೌತಿ ಖಾತೆ ಆಗಬೇಕಿರುತ್ತದೆ. ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿವಾರು ಪೌತಿ ಖಾತೆ ಆಂದೋಲನ ನಡೆಸುವಂತೆ ತಹಶೀಲ್ದಾರ್ ಗೆ ನಿರ್ದೇಶನ ನೀಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಈ ಸ್ವತ್ತು ಪತ್ರಗಳನ್ನು ಸಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಉಪವಿಭಾಗಾಧಿಕಾರಿ ನಂದೀಶ್, ಡಿ.ಡಿ.ಎಲ್ ಆರ್ ಉಮೇಶ್, ತಹಶೀಲ್ದಾರ್ ನಿಸರ್ಗ ಪ್ರಿಯಾ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

27 mins ago

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

2 hours ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

2 hours ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

3 hours ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

3 hours ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

3 hours ago