ಮೈಸೂರು

ಆರೋಗ್ಯ, ಸ್ವಚ್ಛತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ: ಕೆ.ಎಂ ಗಾಯಿತ್ರಿ

ಮೈಸೂರು : ಎಲ್ಲಾ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದರು.

ಸಾಲಿಗ್ರಾಮ ತಾಲ್ಲೂಕಿನ ಶೀಗೆವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮದಲ್ಲಿ ವಾಂತಿ-ಬೇದಿಯಿಂದಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾತ್ಕಾಲಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಆಶಾ ಕಾರ್ಯಕರ್ತೆಯರು ತಂಡ ರಚಿಸಿ ಗ್ರಾಮದ ಪ್ರತಿಯೊಂದು ಮನೆ-ಮನೆಗೆ ಭೇಟಿ ನೀಡಬೇಕು. ಮಕ್ಕಳಿಂದ ವಯಸ್ಸಾದ ವೃದ್ಧರವರೆಗೂ ಆರೋಗ್ಯ ವಿಚಾರಣೆ ನಡೆಸಿ. ಮನೆಯ ಶುಚಿತ್ವ, ಶುದ್ದ ಕುಡಿಯುವ ನೀರು ಹಾಗೂ ಓ.ಆರ್.ಎಸ್. ಪುಡಿಯನ್ನು ಸೇವಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಮುಂಜಾಗ್ರತಾ ಕ್ರಮವಾಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ವಾಂತಿ ಭೇದಿ ಕಂಡು ಬಂದ ಮಂದಿ ಆರೋಗ್ಯವಾಗಿದ್ದಾರೆ. ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ ಓರ್ವ ಮೃತಪಟ್ಟಿದ್ದಾರೆ. ಸದರಿ ಪ್ರಕರಣದಲ್ಲಿ ಆರೋಗ್ಯಾಧಿಕಾರಿ ಅವರ ವರದಿ ಪ್ರಕಾರ ಅವರು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚರಂಡಿ, ನೀರಿನ ಟ್ಯಾಂಕ್ ಮತ್ತು ಸ್ಥಾವರಗಳನ್ನು ಕೂಡಲೇ ಸ್ವಚ್ಛಗೊಳಿಸಿ. ಶುದ್ಧ ಕುಡಿಯುವ ನೀರನ್ನು ಪೂರೈಸುವಂತೆ ಹಾಗೂ ಆರೋಗ್ಯ ಕೇಂದ್ರದ ಬಗ್ಗೆ ನೀಗಾವಹಿಸುವಂತೆ ಪಿಡಿಒ ಅವರಿಗೆ ಸೂಚಿಸಿದರು.

ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸುವ ಕೊಟ್ಟಿಗೆ, ಕೆರೆ, ನೀರುಗಾಲುವೆ, ಮನೆ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಂಡು ಗ್ರಾಮದ ಅಭಿವೃದ್ದಿಗೆ ಸಹಕರಿಸುವಂತೆ ಅಧ್ಯಕ್ಷರಿಗೆ ಸಲಹೆ ನೀಡಿದರು.

ಬಳಿಕ ಅಂಗನವಾಡಿಗೆ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿಯ ಮೂಲಭೂತ ಸೌಕರ್ಯದ ಬಗ್ಗೆ ಮಾಹಿತಿ ಪಡೆದು, ಅಡುಗೆ ಮನೆಗೆ ತೆರಳಿ ಆಹಾರದ ಗುಣಮಟ್ಟ ಪರಿಶೀಲಿಸಿದರು . ಅಡುಗೆ ಮನೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಮಕ್ಕಳಿಗೆ ಅತ್ಯಂತ ಗುಣಮಟ್ಟದ ಪೌಷ್ಠಿಕಾಂಶ ಹೊಂದಿರುವ ಆಹಾರ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್, ತಹಶೀಲ್ದಾರ್ ನರಗುಂದ, ಕಾರ್ಯನಿರ್ವಾಹಕ ಅಧಿಕಾರಿಗಳು ಕುಲ್ ದೀಪ್, ಪಿಡಿಓ ಶ್ರೀಧರ್, ಅಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

10 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

11 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

15 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

16 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

22 hours ago