ಮೈಸೂರು : ಎಲ್ಲಾ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಮತ್ತು ಸ್ವಚ್ಛತೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಜನತೆಯ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಸೂಚನೆ ನೀಡಿದರು.
ಸಾಲಿಗ್ರಾಮ ತಾಲ್ಲೂಕಿನ ಶೀಗೆವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟಹಳ್ಳಿ ಗ್ರಾಮದಲ್ಲಿ ವಾಂತಿ-ಬೇದಿಯಿಂದಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾತ್ಕಾಲಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಆಶಾ ಕಾರ್ಯಕರ್ತೆಯರು ತಂಡ ರಚಿಸಿ ಗ್ರಾಮದ ಪ್ರತಿಯೊಂದು ಮನೆ-ಮನೆಗೆ ಭೇಟಿ ನೀಡಬೇಕು. ಮಕ್ಕಳಿಂದ ವಯಸ್ಸಾದ ವೃದ್ಧರವರೆಗೂ ಆರೋಗ್ಯ ವಿಚಾರಣೆ ನಡೆಸಿ. ಮನೆಯ ಶುಚಿತ್ವ, ಶುದ್ದ ಕುಡಿಯುವ ನೀರು ಹಾಗೂ ಓ.ಆರ್.ಎಸ್. ಪುಡಿಯನ್ನು ಸೇವಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದರು.
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿ, ಮುಂಜಾಗ್ರತಾ ಕ್ರಮವಾಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ವಾಂತಿ ಭೇದಿ ಕಂಡು ಬಂದ ಮಂದಿ ಆರೋಗ್ಯವಾಗಿದ್ದಾರೆ. ಕಲುಷಿತ ನೀರು ಸೇವಿಸಿ ಗ್ರಾಮದಲ್ಲಿ ಓರ್ವ ಮೃತಪಟ್ಟಿದ್ದಾರೆ. ಸದರಿ ಪ್ರಕರಣದಲ್ಲಿ ಆರೋಗ್ಯಾಧಿಕಾರಿ ಅವರ ವರದಿ ಪ್ರಕಾರ ಅವರು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚರಂಡಿ, ನೀರಿನ ಟ್ಯಾಂಕ್ ಮತ್ತು ಸ್ಥಾವರಗಳನ್ನು ಕೂಡಲೇ ಸ್ವಚ್ಛಗೊಳಿಸಿ. ಶುದ್ಧ ಕುಡಿಯುವ ನೀರನ್ನು ಪೂರೈಸುವಂತೆ ಹಾಗೂ ಆರೋಗ್ಯ ಕೇಂದ್ರದ ಬಗ್ಗೆ ನೀಗಾವಹಿಸುವಂತೆ ಪಿಡಿಒ ಅವರಿಗೆ ಸೂಚಿಸಿದರು.
ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸುವ ಕೊಟ್ಟಿಗೆ, ಕೆರೆ, ನೀರುಗಾಲುವೆ, ಮನೆ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಂಡು ಗ್ರಾಮದ ಅಭಿವೃದ್ದಿಗೆ ಸಹಕರಿಸುವಂತೆ ಅಧ್ಯಕ್ಷರಿಗೆ ಸಲಹೆ ನೀಡಿದರು.
ಬಳಿಕ ಅಂಗನವಾಡಿಗೆ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿಯ ಮೂಲಭೂತ ಸೌಕರ್ಯದ ಬಗ್ಗೆ ಮಾಹಿತಿ ಪಡೆದು, ಅಡುಗೆ ಮನೆಗೆ ತೆರಳಿ ಆಹಾರದ ಗುಣಮಟ್ಟ ಪರಿಶೀಲಿಸಿದರು . ಅಡುಗೆ ಮನೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಮಕ್ಕಳಿಗೆ ಅತ್ಯಂತ ಗುಣಮಟ್ಟದ ಪೌಷ್ಠಿಕಾಂಶ ಹೊಂದಿರುವ ಆಹಾರ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜ್, ತಹಶೀಲ್ದಾರ್ ನರಗುಂದ, ಕಾರ್ಯನಿರ್ವಾಹಕ ಅಧಿಕಾರಿಗಳು ಕುಲ್ ದೀಪ್, ಪಿಡಿಓ ಶ್ರೀಧರ್, ಅಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…