ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 ರಲ್ಲಿ 1.26 ಗುಂಟೆ ಮತ್ತು 444ರ ಸರ್ವೆ ನಂಬರ್ ನಲ್ಲಿ 1.30 ಗುಂಟೆ ಜಮೀನು ಹೊಂದಿದ್ದಾರೆ. ಆದರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅದೇ ಗ್ರಾಮದ ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ಇಬ್ಬರು ಕೂಡ ಬದುಕಿರುವ ಚಂದ್ರಶೇಖರ್ ಮೃತಪಟ್ಟಿದ್ದಾರೆ ಎಂದು ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀನಾಥ್ ಅವರಿಂದ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ.
ಇದಾದ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಶಾಮಿಲಾಗಿ ಚಂದ್ರಶೇಖರ್ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ತೆರಳಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ.
ಈ ವಿಚಾರವೆಲ್ಲಾ ತಿಳಿದಂತಹ ತಿಳಿದ ಚಂದ್ರಶೇಖರ್ ಸಂಬಂಧಿ ಎನ್.ನಾಗರಾಜರಾವ್ ಎಂಬುವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಂಜನಗೂಡು ಕಂದಾಯ ಇಲಾಖೆಯ ಗೋಳೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್, ಶಿರಸ್ತೆದಾರ್ ಶ್ರೀನಾಥ್, ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ವಿರುದ್ಧ ದೂರು ದಾಖಲಾಗಿದೆ.
ಹೀಗಾಗಿ ಈ ಪ್ರಕರಣ ಸಂಬಂಧ ನಕಲಿ ಪ್ರಮಾಣ ಪತ್ರ ನೀಡಿದ್ದ ಶಿರಸ್ತೇದಾರ್ ಶ್ರೀನಾಥ್ ಅವರನ್ನು ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಉಳಿದಿರುವ ಅಧಿಕಾರಿಗಳ ವಿರುದ್ಧ ತನಿಖೆ ನಂತರ ಶಿಸ್ತು ಕ್ರಮಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…