ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 ರಲ್ಲಿ 1.26 ಗುಂಟೆ ಮತ್ತು 444ರ ಸರ್ವೆ ನಂಬರ್ ನಲ್ಲಿ 1.30 ಗುಂಟೆ ಜಮೀನು ಹೊಂದಿದ್ದಾರೆ. ಆದರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅದೇ ಗ್ರಾಮದ ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ಇಬ್ಬರು ಕೂಡ ಬದುಕಿರುವ ಚಂದ್ರಶೇಖರ್ ಮೃತಪಟ್ಟಿದ್ದಾರೆ ಎಂದು ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀನಾಥ್ ಅವರಿಂದ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ.
ಇದಾದ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಶಾಮಿಲಾಗಿ ಚಂದ್ರಶೇಖರ್ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ತೆರಳಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ.
ಈ ವಿಚಾರವೆಲ್ಲಾ ತಿಳಿದಂತಹ ತಿಳಿದ ಚಂದ್ರಶೇಖರ್ ಸಂಬಂಧಿ ಎನ್.ನಾಗರಾಜರಾವ್ ಎಂಬುವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಂಜನಗೂಡು ಕಂದಾಯ ಇಲಾಖೆಯ ಗೋಳೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್, ಶಿರಸ್ತೆದಾರ್ ಶ್ರೀನಾಥ್, ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ವಿರುದ್ಧ ದೂರು ದಾಖಲಾಗಿದೆ.
ಹೀಗಾಗಿ ಈ ಪ್ರಕರಣ ಸಂಬಂಧ ನಕಲಿ ಪ್ರಮಾಣ ಪತ್ರ ನೀಡಿದ್ದ ಶಿರಸ್ತೇದಾರ್ ಶ್ರೀನಾಥ್ ಅವರನ್ನು ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಉಳಿದಿರುವ ಅಧಿಕಾರಿಗಳ ವಿರುದ್ಧ ತನಿಖೆ ನಂತರ ಶಿಸ್ತು ಕ್ರಮಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…
ಜಕಾರ್ತಾ : ಇಂಡೋನೇಷ್ಯಾದ ಉತ್ತರ ಮೊಲುಕ್ಕಾ ಸಮುದ್ರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು…
ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು…