ಮೈಸೂರು

ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಅಧಿಕಾರಿ ಸಸ್ಪೆಂಡ್..!

ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 ರಲ್ಲಿ 1.26 ಗುಂಟೆ ಮತ್ತು 444ರ ಸರ್ವೆ ನಂಬರ್ ನಲ್ಲಿ 1.30 ಗುಂಟೆ ಜಮೀನು ಹೊಂದಿದ್ದಾರೆ. ಆದರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅದೇ ಗ್ರಾಮದ ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ಇಬ್ಬರು ಕೂಡ ಬದುಕಿರುವ ಚಂದ್ರಶೇಖರ್​ ಮೃತಪಟ್ಟಿದ್ದಾರೆ ಎಂದು ತಹಸೀಲ್ದಾರ್​ ಕಚೇರಿಯ ಶಿರಸ್ತೇದಾರ್ ಶ್ರೀನಾಥ್ ಅವರಿಂದ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ.

ಇದಾದ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಶಾಮಿಲಾಗಿ ಚಂದ್ರಶೇಖರ್‌ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ತೆರಳಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ.

ಈ ವಿಚಾರವೆಲ್ಲಾ ತಿಳಿದಂತಹ ತಿಳಿದ ಚಂದ್ರಶೇಖರ್ ಸಂಬಂಧಿ ಎನ್.ನಾಗರಾಜರಾವ್ ಎಂಬುವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಂಜನಗೂಡು ಕಂದಾಯ ಇಲಾಖೆಯ ಗೋಳೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್, ಶಿರಸ್ತೆದಾರ್ ಶ್ರೀನಾಥ್, ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ವಿರುದ್ಧ ದೂರು ದಾಖಲಾಗಿದೆ.

ಹೀಗಾಗಿ ಈ ಪ್ರಕರಣ ಸಂಬಂಧ ನಕಲಿ ಪ್ರಮಾಣ ಪತ್ರ ನೀಡಿದ್ದ ಶಿರಸ್ತೇದಾರ್ ಶ್ರೀನಾಥ್ ಅವರನ್ನು ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಉಳಿದಿರುವ ಅಧಿಕಾರಿಗಳ ವಿರುದ್ಧ ತನಿಖೆ ನಂತರ ಶಿಸ್ತು ಕ್ರಮಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

4 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

6 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

14 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

16 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

17 hours ago