ಮೈಸೂರು : ಬದುಕಿರುವಾಗಲೇ ಮರಣ ಪತ್ರ ನೀಡಿದ್ದ ಆರೋಪದ ಮೇರೆಗೆ ಶಿರಸ್ತೇದಾರ್ ಶ್ರೀನಾಥ್ ಎಂಬುವವರನ್ನ ಮೈಸೂರಿನ ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಚಂದ್ರಶೇಖರ್ ಎಂಬುವವರು ವಿದೇಶದಲ್ಲಿ ವಾಸವಾಗಿದ್ದು, ಊರಿನಲ್ಲಿ ಸರ್ವೆ ನಂಬರ್ 442 ರಲ್ಲಿ 1.26 ಗುಂಟೆ ಮತ್ತು 444ರ ಸರ್ವೆ ನಂಬರ್ ನಲ್ಲಿ 1.30 ಗುಂಟೆ ಜಮೀನು ಹೊಂದಿದ್ದಾರೆ. ಆದರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಅದೇ ಗ್ರಾಮದ ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ಇಬ್ಬರು ಕೂಡ ಬದುಕಿರುವ ಚಂದ್ರಶೇಖರ್ ಮೃತಪಟ್ಟಿದ್ದಾರೆ ಎಂದು ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಶ್ರೀನಾಥ್ ಅವರಿಂದ ಮರಣ ಪ್ರಮಾಣ ಪತ್ರ ಪಡೆದಿದ್ದಾರೆ.
ಇದಾದ ನಂತರ ಕಂದಾಯ ಇಲಾಖೆಗೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಶಾಮಿಲಾಗಿ ಚಂದ್ರಶೇಖರ್ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಇನ್ನು ಕಂದಾಯ ಇಲಾಖೆ ಅಧಿಕಾರಿಗಳು ಕೂಡ ಜಮೀನಿಗೆ ತೆರಳಿ ಪರಿಶೀಲನೆ ನಡೆಸದೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ.
ಈ ವಿಚಾರವೆಲ್ಲಾ ತಿಳಿದಂತಹ ತಿಳಿದ ಚಂದ್ರಶೇಖರ್ ಸಂಬಂಧಿ ಎನ್.ನಾಗರಾಜರಾವ್ ಎಂಬುವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ನಂಜನಗೂಡು ಕಂದಾಯ ಇಲಾಖೆಯ ಗೋಳೂರು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ್, ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್, ಶಿರಸ್ತೆದಾರ್ ಶ್ರೀನಾಥ್, ಕೃಷ್ಣೇಗೌಡ ಮತ್ತು ಶಿವ ಮಲ್ಲೇಗೌಡ ವಿರುದ್ಧ ದೂರು ದಾಖಲಾಗಿದೆ.
ಹೀಗಾಗಿ ಈ ಪ್ರಕರಣ ಸಂಬಂಧ ನಕಲಿ ಪ್ರಮಾಣ ಪತ್ರ ನೀಡಿದ್ದ ಶಿರಸ್ತೇದಾರ್ ಶ್ರೀನಾಥ್ ಅವರನ್ನು ಪ್ರಾದೇಶಿಕ ಆಯುಕ್ತರರು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಉಳಿದಿರುವ ಅಧಿಕಾರಿಗಳ ವಿರುದ್ಧ ತನಿಖೆ ನಂತರ ಶಿಸ್ತು ಕ್ರಮಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…