ಮೈಸೂರು

ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಟಿ; ಊಹಾಪೋಹಗಳಿಗೆ ಆಸ್ಪದವಿಲ್ಲ : ಸಿಎಂ

ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ, ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು.

ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ: ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ ಎಂದು ಮರುಪ್ರಶ್ನಿಸಿದರಲ್ಲದೇ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೆಂದು ತಿಳಿಸಿದ್ದಾರೆ ಎಂದರು.

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ: ಕಾಂಗ್ರೆಸ್‌ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಭಿಪ್ರಾಯ ತಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದರು.

ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ಭೇಟಿ: ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಂಭವವಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂ ಎಲ್ ಸಿ , ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ರೀಲ್ಸ್‌ ತಂದ ಆಪತ್ತು: ಅಪಘಾತದಲ್ಲಿ ಬಾಲಕ ಸಾವು

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ…

14 mins ago

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

21 mins ago

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

2 hours ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

2 hours ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

3 hours ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

3 hours ago