ಮೈಸೂರು

ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಟಿ; ಊಹಾಪೋಹಗಳಿಗೆ ಆಸ್ಪದವಿಲ್ಲ : ಸಿಎಂ

ಹೊಸದಿಲ್ಲಿ : ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಟಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯನ್ನು ಅಲ್ಲಗೆಳೆದ ಮೇಲೆ, ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳನ್ನು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದರು.

ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ: ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇನೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ ಎಂದು ಮರುಪ್ರಶ್ನಿಸಿದರಲ್ಲದೇ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೆಂದು ತಿಳಿಸಿದ್ದಾರೆ ಎಂದರು.

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ: ಕಾಂಗ್ರೆಸ್‌ನ ಕೆಲ ಶಾಸಕರೇ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಭಿಪ್ರಾಯ ತಿಳಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಇದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ ಎಂದರು.

ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿಯ ಭೇಟಿ: ರಾಹುಲ್ ಗಾಂಧಿಯವರನ್ನು ಭೇಟಿಯಾಗುವ ಸಂಭವವಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂ ಎಲ್ ಸಿ , ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

7 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

8 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

8 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

8 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

8 hours ago