ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಕ್ರಿಕೆಟ್‌ ಪಂದ್ಯ : ಅಧಿಕಾರಿಗಳ ವಿಚಾರಣೆ

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ.

ಈ ದೃಶ್ಯಗಳು ಪರಿಸರ ಸಂರಕ್ಷಣಾವಾದಿಗಳು ಮತ್ತು ವನ್ಯಜೀವಿ ಕಾರ್ಯಕರ್ತರಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಂತೆ, ನಾಗರಹೊಳೆ ಹುಲಿ ಸಂರಕ್ಷಣಾ ಅಭಯಾರಣ್ಯದ ಅರಣ್ಯಾಧಿಕಾರಿಗಳನ್ನು, ಬೆಂಗಳೂರಿನ ಪ್ರಧಾನ ಕಚೇರಿಯ ಉನ್ನತ ಅಽಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಾನವ-ಪ್ರಾಣಿ ಸಂಘರ್ಷದ ಘಟನೆಗಳು ಹೆಚ್ಚುತ್ತಿರುವ ಹಾಗೂ ಬುಡಕಟ್ಟು ಮತ್ತು ಅರಣ್ಯವಾಸಿಗಳ ಸ್ಥಳಾಂತರ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ನಾಗರಹೊಳೆ ಅರಣ್ಯದೊಳಗಿನ ನಾನಾಚ್ಚಿ ಗೇಟ್ ಬಳಿ ಜನರ ಗುಂಪೊಂದು ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸುತ್ತಿರುವುದು ಕಂಡುಬಂದಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:-ಶಾಸಕರಿಗೆ ಡಿಸಿಎಂ ಗಾಳ : ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ಭೇಟಿ

ಬುಧವಾರ ಮತ್ತು ಗುರುವಾರ ಪಂದ್ಯಾವಳಿ ನಡೆದಿದ್ದು, ಇದಕ್ಕಾಗಿ ಹೆಚ್ಚಿನ ಪ್ರಮಾಣದ ಗಿಡಗಳನ್ನು ತೆರವುಗೊಳಿಸಲಾಗಿದೆ. ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ವಾಹನಗಳನ್ನು ಮೈದಾನದ ಸುತ್ತಲೂ ನಿಲ್ಲಿಸಿ ತೆರೆದ ಸ್ಥಳದಲ್ಲಿ ಊಟ ಮಾಡುತ್ತಿರುವುದು ಕಂಡು ಬಂದಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ ಮಾತ್ರವಲ್ಲದೆ ಅರಣ್ಯ ಸಂರಕ್ಷಣಾ ಕಾಯ್ದೆ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಽಕಾರದ ನಿಯಮಗಳು ಮತ್ತು ಸುಪ್ರೀಂ ಕೋರ್ಟ್ ಆದೇಶಗಳ ಉಲ್ಲಂಘನೆ ಯಾಗಿದೆ ಎಂದು ಅರಣ್ಯ ಸಂರಕ್ಷಣವಾದಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಅರಣ್ಯ ಇಲಾಖೆಗಳಿಗೆ ಯಾವುದೇ ಅರಣ್ಯೇತರ ಚಟುವಟಿಕೆಗಳು ಮತ್ತು ಹಸಿರು ಹೊದಿಕೆಯನ್ನು ತೆರವುಗೊಳಿಸಲು ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿತ್ತು.

ನಾಗರಹೊಳೆ ಹುಲಿ ಮೀಸಲು ನಿರ್ದೇಶಕಿ ಪಿ.ಎ. ಸೀಮಾ ಅವರು ಕಾಡಿನೊಳಗಿನ ಕುಗ್ರಾಮಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದ ಮಕ್ಕಳು ಈ ಪಂದ್ಯವನ್ನು ಆಯೋಜಿಸಿದ್ದರು. ಸ್ಥಳವು ಸಫಾರಿ ಪಾಯಿಂಟ್ ಬಳಿ ಇದೆ. ಅವರು ಕಳೆದ ೧೦ ವರ್ಷಗಳಿಂದ ಅಲ್ಲಿ ಕ್ರಿಕೆಟ್ ಆಡುತ್ತಿದ್ದರು. ೨೦೧೫ ರಿಂದ ಈ ಪ್ರದೇಶದಲ್ಲಿ ಯಾವುದೇ ಮರಗಳನ್ನು ಕಡಿಯಲಾಗಿಲ್ಲ ಮತ್ತು ಮರ ಕಡಿಯಲು ಯಾವುದೇ ಅನುಮತಿಯನ್ನೂ ನೀಡಿಲ್ಲ ಎಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

31 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

3 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

4 hours ago