ಮೈಸೂರು

ನಾಗರಹೊಳೆ ಅಭಯಾರಣ್ಯದಲ್ಲಿ ಕ್ರಿಕೆಟ್‌ ಪಂದ್ಯ : ಅಧಿಕಾರಿಗಳ ವಿಚಾರಣೆ

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ.

ಈ ದೃಶ್ಯಗಳು ಪರಿಸರ ಸಂರಕ್ಷಣಾವಾದಿಗಳು ಮತ್ತು ವನ್ಯಜೀವಿ ಕಾರ್ಯಕರ್ತರಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಂತೆ, ನಾಗರಹೊಳೆ ಹುಲಿ ಸಂರಕ್ಷಣಾ ಅಭಯಾರಣ್ಯದ ಅರಣ್ಯಾಧಿಕಾರಿಗಳನ್ನು, ಬೆಂಗಳೂರಿನ ಪ್ರಧಾನ ಕಚೇರಿಯ ಉನ್ನತ ಅಽಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಾನವ-ಪ್ರಾಣಿ ಸಂಘರ್ಷದ ಘಟನೆಗಳು ಹೆಚ್ಚುತ್ತಿರುವ ಹಾಗೂ ಬುಡಕಟ್ಟು ಮತ್ತು ಅರಣ್ಯವಾಸಿಗಳ ಸ್ಥಳಾಂತರ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ನಾಗರಹೊಳೆ ಅರಣ್ಯದೊಳಗಿನ ನಾನಾಚ್ಚಿ ಗೇಟ್ ಬಳಿ ಜನರ ಗುಂಪೊಂದು ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸುತ್ತಿರುವುದು ಕಂಡುಬಂದಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:-ಶಾಸಕರಿಗೆ ಡಿಸಿಎಂ ಗಾಳ : ಪರಪ್ಪನ ಅಗ್ರಹಾರ ಜೈಲಿಗೆ ಡಿಕೆಶಿ ಭೇಟಿ

ಬುಧವಾರ ಮತ್ತು ಗುರುವಾರ ಪಂದ್ಯಾವಳಿ ನಡೆದಿದ್ದು, ಇದಕ್ಕಾಗಿ ಹೆಚ್ಚಿನ ಪ್ರಮಾಣದ ಗಿಡಗಳನ್ನು ತೆರವುಗೊಳಿಸಲಾಗಿದೆ. ಪಂದ್ಯವನ್ನು ವೀಕ್ಷಿಸಲು ಆಗಮಿಸಿದ ಹೆಚ್ಚಿನ ಸಂಖ್ಯೆಯ ಜನರು ತಮ್ಮ ವಾಹನಗಳನ್ನು ಮೈದಾನದ ಸುತ್ತಲೂ ನಿಲ್ಲಿಸಿ ತೆರೆದ ಸ್ಥಳದಲ್ಲಿ ಊಟ ಮಾಡುತ್ತಿರುವುದು ಕಂಡು ಬಂದಿದೆ. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ ಮಾತ್ರವಲ್ಲದೆ ಅರಣ್ಯ ಸಂರಕ್ಷಣಾ ಕಾಯ್ದೆ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಽಕಾರದ ನಿಯಮಗಳು ಮತ್ತು ಸುಪ್ರೀಂ ಕೋರ್ಟ್ ಆದೇಶಗಳ ಉಲ್ಲಂಘನೆ ಯಾಗಿದೆ ಎಂದು ಅರಣ್ಯ ಸಂರಕ್ಷಣವಾದಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಅರಣ್ಯ ಇಲಾಖೆಗಳಿಗೆ ಯಾವುದೇ ಅರಣ್ಯೇತರ ಚಟುವಟಿಕೆಗಳು ಮತ್ತು ಹಸಿರು ಹೊದಿಕೆಯನ್ನು ತೆರವುಗೊಳಿಸಲು ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿತ್ತು.

ನಾಗರಹೊಳೆ ಹುಲಿ ಮೀಸಲು ನಿರ್ದೇಶಕಿ ಪಿ.ಎ. ಸೀಮಾ ಅವರು ಕಾಡಿನೊಳಗಿನ ಕುಗ್ರಾಮಗಳಲ್ಲಿ ವಾಸಿಸುವ ಬುಡಕಟ್ಟು ಜನಾಂಗದ ಮಕ್ಕಳು ಈ ಪಂದ್ಯವನ್ನು ಆಯೋಜಿಸಿದ್ದರು. ಸ್ಥಳವು ಸಫಾರಿ ಪಾಯಿಂಟ್ ಬಳಿ ಇದೆ. ಅವರು ಕಳೆದ ೧೦ ವರ್ಷಗಳಿಂದ ಅಲ್ಲಿ ಕ್ರಿಕೆಟ್ ಆಡುತ್ತಿದ್ದರು. ೨೦೧೫ ರಿಂದ ಈ ಪ್ರದೇಶದಲ್ಲಿ ಯಾವುದೇ ಮರಗಳನ್ನು ಕಡಿಯಲಾಗಿಲ್ಲ ಮತ್ತು ಮರ ಕಡಿಯಲು ಯಾವುದೇ ಅನುಮತಿಯನ್ನೂ ನೀಡಿಲ್ಲ ಎಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago