ನಂಜನಗೂಡು: ಹುಲಿ, ಚಿರತೆಗಳ ಕಾಟದ ನಡುವೆ ಈಗ ನಂಜನಗೂಡು ತಾಲ್ಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಕೂಗಳತೆ ದೂರದಲ್ಲಿರುವ ಕೆರೆಯಲ್ಲಿ ಕಳೆದ ಮೂರು ದಿನಗಳಿಂದ ಕೆರೆ ಆವರಣದೊಳಗೆ ಮೊಸಳೆ ತಿರುಗಾಡುತ್ತಿರುವುದನ್ನು ರೈತರು ಗಮನಿಸಿದ್ದಾರೆ. ಮೊಸಳೆ ಮಲಗಿರುವುದು ಹಾಗೂ ನೀರಿನೊಳಗೆ ಮೊಸಳೆ ಮುಳುಗಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇದನ್ನು ಓದಿ: ನಾಗರಹೊಳೆ ಅರಣ್ಯಕ್ಕೆ ಕಂಟಕವಾಗಿರುವ ಸೆನ್ನಾ ಸಸ್ಯಪ್ರಭೇದ
ಮೂರು ದಿನಗಳಿಂದಲೂ ಪ್ರತ್ಯಕ್ಷವಾಗಿ ಗಮನಿಸಿದ ನಂತರ ಮೊಸಳೆ ಎಂಬುದು ದೃಢಪಟ್ಟಿದೆ. ತಕ್ಷಣವೇ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ ಧನಂಜಯ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಕೆರೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಸ್ಕೂರು ಗ್ರಾಮದ ಕೆರೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮೊಸಳೆ ಕಾಣಿಸಿಕೊಂಡಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಲಾಗಿತ್ತು. ಆದರೆ ಇಲಾಖೆಯವರು ಸ್ಪಂದಿಸುವುದಿಲ್ಲ. ಇದರಿಂದ ಗ್ರಾಮಸ್ಥರು ಮತ್ತು ರೈತರು ಕೆರೆಯ ಬಳಿ ಮತ್ತು ಜಮೀನಿಗೆ ತೆರಳಲು ಭಯ ಪಡುತ್ತಿದ್ದಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಮತ್ತು ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ವಿಷಯ ಮುಟ್ಟಿಸಿದ ತಕ್ಷಣವೇ ಸ್ಥಳಕ್ಕೆ ಬಂದು ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಅಧ್ಯಕ್ಷ ಹುಸ್ಕೂರ್ ಗಿರೀಶ್ ಆಗ್ರಹಿಸಿದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…