ಮೈಸೂರು

ಬೆಳೆ ನಷ್ಟ | ಸಮೀಕ್ಷೆ ಮುಗಿದ ಬಳಿಕ ಪರಿಹಾರ ವಿತರಣೆ ; ಸಿಎಂ

ಮೈಸೂರು : ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನಷ್ಟಕ್ಕೀಡಾಗಿದ್ದು, ಬೆಳೆ ನಷ್ಟದ ಕುರಿತು ನಡೆಯುತ್ತಿರುವ ಸಮೀಕ್ಷೆ ಮುಗಿದ ಬಳಿಕ ರೈತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆ ಕಟ್ಟೆಗಳು ತುಂಬಿವೆ. ಬೆಳೆಗಳೂ ಚೆನ್ನಾಗಿ ಬಂದಿವೆ. ಆದರೆ ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದಾಗಿ ಬೆಳೆ ನಷ್ಟ ಸಂಭವಿಸಿದೆ. ಮೈಸೂರು ಭಾಗದಲ್ಲಿ ಬೆಳೆ ನಷ್ಟ ಕಡಿಮೆಯಿದೆ.

ಇದನ್ನು ಓದಿ :  ಜಾತಿಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಬಂದ್‌ ಮಾಡುವ ಸಂಚು: ಆರ್.‌ಅಶೋಕ್‌ ಆರೋಪ

ಒಟ್ಟಾರೆಯಾಗಿ ರಾಜ್ಯದಲ್ಲಿ ಅತಿವೃಷ್ಠಿಯಿಂದಾಗಿ ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಷ್ಟವಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು, ಈಗಾಗಲೇ ನಾನು ಕಲಬುರಗಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದೇನೆ. ಆದರೆ ಪೂರ್ಣವಾಗಿ ಸಮೀಕ್ಷೆ ಮಾಡಲು ಆಗಿಲ್ಲ. ಮಳೆ ಬರುತ್ತಿರುವುದರಿಂದ ಸಮೀಕ್ಷೆಗೆ ಅಡ್ಡಿಯಾಗುತ್ತಿದೆ. ಸಮೀಕ್ಷೆಯನ್ನು ಪೂರ್ಣಗೊಳಿಸಿದ ಬಳಿಕ ಖುಷ್ಕಿ ಜಮೀನಿಗೆ ಹೆಕ್ಟೇರ್‌ಗೆ ೧೭ ಸಾವಿರ ರೂ., ನೀರಾವರಿ ಪ್ರದೇಶಕ್ಕೆ ಹೆಕ್ಟೇರ್‌ಗೆ ೧೭,೫೦೦ ರೂ., ಬಹುಬೆಳೆ ನಷ್ಟವಾಗಿರುವ ಪ್ರದೇಶದಲ್ಲಿ ಹೆಕ್ಟೇರ್‌ಗೆ ೩೧ ಸಾವಿರ ರೂ.ಗಳನ್ನು ರೈತರಿಗೆ ಪರಿಹಾರವಾಗಿ ನೀಡಲಾಗುವುದು ಎಂದು ಹೇಳಿದರು. ಹಳೇ ಮೈಸೂರು ಭಾಗದಲ್ಲಿ ಅಷ್ಟೇನೂ ಬೆಳೆ ನಷ್ಟವಾಗಿಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago