ಮೈಸೂರು

ಬೆಳೆ ನಷ್ಟ : ಕತ್ತು ಕೊಯ್ದುಕೊಂಡು ರೈತ ಆತ್ಮಹತ್ಯೆ

ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಜಿ.ಜಿ.ಕಾಲೋನಿ ಮತ್ತು ಭೋಗೇಶ್ವರ ಕಾಲೋನಿಯ ವ್ಯಾಪ್ತಿಯಲ್ಲಿರುವ ಅಣ್ಣಯ್ಯ ಅವರ ಜಮೀನಿನಲ್ಲಿ ಗುತ್ತಿಗೆಗೆ ಬೆಳೆ ಬೆಳೆಯುತ್ತಿದ್ದ ಕೇರಳದ ರೈತ ಮುಕುಂದ (೪೨) ಆತ್ಮಹತ್ಯೆ ಮಾಡಿಕೊಂಡವರು.

ಕೇರಳದ ನಿವಾಸಿಯಾದ ರೈತ ಮುಕುಂದ ಹತ್ತು ವರ್ಷಗಳಿಂದ ಒಬ್ಬರೇ ಈ ಭಾಗದಲ್ಲಿ ಜಮೀನುಗಳನ್ನು ಗುತ್ತಿಗೆಗೆ ಪಡೆದು ಬೆಳೆ ಬೆಳೆಯುತ್ತಿದ್ದರು. ಆದರೆ ಈ ಬಾರಿ ೧೦ ಎಕರೆ ಜಮೀನಿನಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ಮುಸುಕಿನ ಜೋಳ, ಇನ್ನಿತರ ಬೆಳೆಗಳು ರೋಗಬಾಧೆಯಿಂದ ಮತ್ತು ಸೂಕ್ತ ಬೆಲೆ ದೊರೆಯದೆ ನಷ್ಟವಾಗಿ ಮಾಡಿದ ಸಾಲವನ್ನು ತೀರಿಸಲು ಸಾಧ್ಯವಾಗದೆ ಜೀವನದಲ್ಲಿ ಜುಗುಪ್ಸೆಗೊಂಡು ಶನಿವಾರ ಮಧ್ಯಾಹ್ನ ಜಮೀನಿನಲ್ಲಿದ್ದ ಶೆಡ್ಡಿನಲ್ಲಿ ಪಾನಮತ್ತನಾಗಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಕ್ಕದ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಈ ಭಾಗದ ಮುಖಂಡರಾದ ಬಾಬು ಜಗಜೀವನ್ ರಾಂ ವಿಚಾರ ವೇದಿಕೆಯ ಮಾಜಿ ಅಧ್ಯಕ್ಷ ಪಿ.ನಾಗರಾಜು ಅವರಿಗೆ ಮತ್ತು ಪೊಲೀಸರಿಗೆ ವಿಷಯ ತಿಳಿಸಿ, ವಿಡಿಯೋ ಮಾಡಿಕೊಂಡು ಮುಕುಂದ ಅವರನ್ನು ಕೋಟೆ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಸಾವನ್ನಪ್ಪಿದ್ದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

19 mins ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

29 mins ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

54 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

1 hour ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

1 hour ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

2 hours ago