ಮೈಸೂರು

ಬೆಳೆ ನಷ್ಟ : ಕತ್ತು ಕೊಯ್ದುಕೊಂಡು ರೈತ ಆತ್ಮಹತ್ಯೆ

ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಜಿ.ಜಿ.ಕಾಲೋನಿ ಮತ್ತು ಭೋಗೇಶ್ವರ ಕಾಲೋನಿಯ ವ್ಯಾಪ್ತಿಯಲ್ಲಿರುವ ಅಣ್ಣಯ್ಯ ಅವರ ಜಮೀನಿನಲ್ಲಿ ಗುತ್ತಿಗೆಗೆ ಬೆಳೆ ಬೆಳೆಯುತ್ತಿದ್ದ ಕೇರಳದ ರೈತ ಮುಕುಂದ (೪೨) ಆತ್ಮಹತ್ಯೆ ಮಾಡಿಕೊಂಡವರು.

ಕೇರಳದ ನಿವಾಸಿಯಾದ ರೈತ ಮುಕುಂದ ಹತ್ತು ವರ್ಷಗಳಿಂದ ಒಬ್ಬರೇ ಈ ಭಾಗದಲ್ಲಿ ಜಮೀನುಗಳನ್ನು ಗುತ್ತಿಗೆಗೆ ಪಡೆದು ಬೆಳೆ ಬೆಳೆಯುತ್ತಿದ್ದರು. ಆದರೆ ಈ ಬಾರಿ ೧೦ ಎಕರೆ ಜಮೀನಿನಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ಮುಸುಕಿನ ಜೋಳ, ಇನ್ನಿತರ ಬೆಳೆಗಳು ರೋಗಬಾಧೆಯಿಂದ ಮತ್ತು ಸೂಕ್ತ ಬೆಲೆ ದೊರೆಯದೆ ನಷ್ಟವಾಗಿ ಮಾಡಿದ ಸಾಲವನ್ನು ತೀರಿಸಲು ಸಾಧ್ಯವಾಗದೆ ಜೀವನದಲ್ಲಿ ಜುಗುಪ್ಸೆಗೊಂಡು ಶನಿವಾರ ಮಧ್ಯಾಹ್ನ ಜಮೀನಿನಲ್ಲಿದ್ದ ಶೆಡ್ಡಿನಲ್ಲಿ ಪಾನಮತ್ತನಾಗಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಕ್ಕದ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಈ ಭಾಗದ ಮುಖಂಡರಾದ ಬಾಬು ಜಗಜೀವನ್ ರಾಂ ವಿಚಾರ ವೇದಿಕೆಯ ಮಾಜಿ ಅಧ್ಯಕ್ಷ ಪಿ.ನಾಗರಾಜು ಅವರಿಗೆ ಮತ್ತು ಪೊಲೀಸರಿಗೆ ವಿಷಯ ತಿಳಿಸಿ, ವಿಡಿಯೋ ಮಾಡಿಕೊಂಡು ಮುಕುಂದ ಅವರನ್ನು ಕೋಟೆ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಸಾವನ್ನಪ್ಪಿದ್ದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago