ಮೈಸೂರು

ಬೆಳೆ ನಷ್ಟ : ಕತ್ತು ಕೊಯ್ದುಕೊಂಡು ರೈತ ಆತ್ಮಹತ್ಯೆ

ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಜಿ.ಜಿ.ಕಾಲೋನಿ ಮತ್ತು ಭೋಗೇಶ್ವರ ಕಾಲೋನಿಯ ವ್ಯಾಪ್ತಿಯಲ್ಲಿರುವ ಅಣ್ಣಯ್ಯ ಅವರ ಜಮೀನಿನಲ್ಲಿ ಗುತ್ತಿಗೆಗೆ ಬೆಳೆ ಬೆಳೆಯುತ್ತಿದ್ದ ಕೇರಳದ ರೈತ ಮುಕುಂದ (೪೨) ಆತ್ಮಹತ್ಯೆ ಮಾಡಿಕೊಂಡವರು.

ಕೇರಳದ ನಿವಾಸಿಯಾದ ರೈತ ಮುಕುಂದ ಹತ್ತು ವರ್ಷಗಳಿಂದ ಒಬ್ಬರೇ ಈ ಭಾಗದಲ್ಲಿ ಜಮೀನುಗಳನ್ನು ಗುತ್ತಿಗೆಗೆ ಪಡೆದು ಬೆಳೆ ಬೆಳೆಯುತ್ತಿದ್ದರು. ಆದರೆ ಈ ಬಾರಿ ೧೦ ಎಕರೆ ಜಮೀನಿನಲ್ಲಿ ಬೆಳೆದಿದ್ದ ಶುಂಠಿ, ಬಾಳೆ, ಮುಸುಕಿನ ಜೋಳ, ಇನ್ನಿತರ ಬೆಳೆಗಳು ರೋಗಬಾಧೆಯಿಂದ ಮತ್ತು ಸೂಕ್ತ ಬೆಲೆ ದೊರೆಯದೆ ನಷ್ಟವಾಗಿ ಮಾಡಿದ ಸಾಲವನ್ನು ತೀರಿಸಲು ಸಾಧ್ಯವಾಗದೆ ಜೀವನದಲ್ಲಿ ಜುಗುಪ್ಸೆಗೊಂಡು ಶನಿವಾರ ಮಧ್ಯಾಹ್ನ ಜಮೀನಿನಲ್ಲಿದ್ದ ಶೆಡ್ಡಿನಲ್ಲಿ ಪಾನಮತ್ತನಾಗಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅಕ್ಕದ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಈ ಭಾಗದ ಮುಖಂಡರಾದ ಬಾಬು ಜಗಜೀವನ್ ರಾಂ ವಿಚಾರ ವೇದಿಕೆಯ ಮಾಜಿ ಅಧ್ಯಕ್ಷ ಪಿ.ನಾಗರಾಜು ಅವರಿಗೆ ಮತ್ತು ಪೊಲೀಸರಿಗೆ ವಿಷಯ ತಿಳಿಸಿ, ವಿಡಿಯೋ ಮಾಡಿಕೊಂಡು ಮುಕುಂದ ಅವರನ್ನು ಕೋಟೆ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಸಾವನ್ನಪ್ಪಿದ್ದರು. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

4 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

1 hour ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

16 hours ago