ಮೈಸೂರು

ಜೋರು ಮಳೆಗೆ ಕೊಚ್ಚಿಹೋದ ಬೆಳೆ

ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ.

ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು ಸಾಕಷ್ಟು ಅವಾಂತರ ಸೃಷ್ಟಿಸಿದ್ದು, ಇಡೀ ಜಮೀನಿನಲ್ಲಿ ಕೆರೆಕಟ್ಟೆಗಳು ಸೃಷ್ಟಿಮಾಡಿತ್ತು. ಹನಗೋಡು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲೂ ಸಾಕಷ್ಟು ಮಳೆ ಬಿದ್ದು, ಕೆರೆ ಕಟ್ಟೆಗಳು ಭರ್ತಿಯಾಗಿದೆ. ಮುತ್ತುರಾಯನ ಹೊಸಳ್ಳಿ, ಕಲ್ಲಹಳ್ಳಿ, ಆಡಿಗನಹಳ್ಳಿ, ಹರೀನಹಳ್ಳಿ, ಕರ್ಣಕುಪ್ಪೆ, ಕಣಗಾಲು, ಮದ್ಲಿಮನುಗನಹಳ್ಳಿಯ ಸುತ್ತ ಮುತ್ತ ಧಾರಕಾರ ಮಳೆ ಸುರಿದಿದೆ.

ನೂರಾರು ಮಂದಿ ತಂಬಾಕು ಸಸಿ ನಾಟಿ ಮಾಡಿ ಗೊಬ್ಬರ ಹಾಕಿದ್ದರು. ಒಂದೇ ಮಳೆಗೆ ಜಮೀನುಗಳಲ್ಲಿ ಕೆರೆ ಸೃಷ್ಟಿಸಿದ ಮಳೆಯು ನೂರಾರು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ತಂಬಾಕು ಸಸಿಯನ್ನು ಮಣ್ಣಿನ ಸಹಿತ ಹೊತ್ತೊಯ್ದಿದೆ. ಅಲ್ಲದೆ ಅಲ್ಲಲ್ಲಿ ಶುಂಠಿ ಬೆಳೆಗೂ ಹಾನಿ ಮಾಡಿದೆ.

ಮುತ್ತುರಾಯನ ಹೊಸಹಳ್ಳಿಯ ರಾಜೇಗೌಡ, ಸಣ್ಣೇಗೌಡ, ರಾಮಚಂದ್ರ, ಬೋರೇಗೌಡ, ಅಶೋಕ, ಲೋಹಿತ್‌ಗೌಡ, ರಾಜಶೇಖರ್, ಶಿವರಾಜೇಗೌಡ, ಅಣ್ಣಾಜಿಗೌಡ ಸೇರಿದಂತೆ ಇತರೆ ರೈತರ ತಂಬಾಕು, ಶುಂಠಿ ಬೆಳೆಯನ್ನು ಗೊಬ್ಬರ ಸಹಿತ ಕೊಚ್ಚಿ ಹಾಕಿದ್ದು, ಲಕ್ಷಾಂತರ ರೂ ನಷ್ಟ ಉಂಟಾಗಿದೆ.

ಕಲ್ಲಹಳ್ಳಿಯ ಬೈಕಟ್ಟೆ, ದೊಡ್ಡಕೆರೆ, ಆಡಿಗನಹಳ್ಳಿಕೆರೆ, ತಾಳೆ ಮಂಡಿಕಟ್ಟೆ, ಹುಣಸೇಗಾಲದ ಕೆರೆ, ಹರೀನಹಳ್ಳಿ, ಕರ್ಣಕುಪ್ಪೆ, ವದ್ಲಿಮನುಗನಹಳ್ಳಿ ಸೇರಿದಂತೆ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿವೆ. ದೊಡ್ಡ ಕೆರೆಗಳಿಗೂ ಸಾಕಷ್ಟು ನೀರು ಹರಿದು ಬಂದಿದೆ. ಮುತ್ತುರಾಯನಹೊಸಹಳ್ಳಿಯ ಸೀತಮ್ಮಮಾದಯ್ಯರ ತೋಟದಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದು ಕಟ್ಟೆಯನ್ನೇ ಒಡೆದು ಹಾಕಿದೆ. ಅಲ್ಲದೆ ತೆಂಗು, ಅಡಿಕೆ ಸಸಿಗಳಿಗೆ ಇತ್ತೀಚೆಗೆ ಹಾಕಿದ್ದ ಟನ್‌ಗಟ್ಟಲೆ ಕೋಳಿ ಗೊಬ್ಬರ, ಕೊಟ್ಟಿಗೆ ಗೊಬ್ಬರವನ್ನೆಲ್ಲಾ ಮಳೆ ನೀರು ಹೊತ್ತೊಯ್ದು ಅಪಾರ ಪ್ರಮಾಣ ನಷ್ಟ ಉಂಟುಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

13 mins ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

1 hour ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

1 hour ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

2 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

2 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

3 hours ago