ಮೈಸೂರು

ಜೋರು ಮಳೆಗೆ ಕೊಚ್ಚಿಹೋದ ಬೆಳೆ

ಹುಣಸೂರು: ತಾಲೂಕಿನ ಹನಗೋಡು ವ್ಯಾಪ್ತಿಯ ವಿವಿದೆಡೆ ಇಂದು(ಮೇ.12) ಸುರಿದ ಜೋರು ಮಳೆಗೆ ಬೆಳೆ ಕೊಚ್ಚಿ ಹೋಗಿದ್ದು, ಕೃಷಿಗಾಗಿ ಅಳವಡಿಸಿದ್ದ ತುಂತುರು ನೀರಾವರಿಯ ಪರಿಕರಗಳು ಹಾನಿಗೊಳಗಾಗಿವೆ.

ಸಂಜೆ 6 ರ ವೇಳೆಗೆ ಆರಂಭವಾದ ಭಾರಿ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದು ಸಾಕಷ್ಟು ಅವಾಂತರ ಸೃಷ್ಟಿಸಿದ್ದು, ಇಡೀ ಜಮೀನಿನಲ್ಲಿ ಕೆರೆಕಟ್ಟೆಗಳು ಸೃಷ್ಟಿಮಾಡಿತ್ತು. ಹನಗೋಡು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲೂ ಸಾಕಷ್ಟು ಮಳೆ ಬಿದ್ದು, ಕೆರೆ ಕಟ್ಟೆಗಳು ಭರ್ತಿಯಾಗಿದೆ. ಮುತ್ತುರಾಯನ ಹೊಸಳ್ಳಿ, ಕಲ್ಲಹಳ್ಳಿ, ಆಡಿಗನಹಳ್ಳಿ, ಹರೀನಹಳ್ಳಿ, ಕರ್ಣಕುಪ್ಪೆ, ಕಣಗಾಲು, ಮದ್ಲಿಮನುಗನಹಳ್ಳಿಯ ಸುತ್ತ ಮುತ್ತ ಧಾರಕಾರ ಮಳೆ ಸುರಿದಿದೆ.

ನೂರಾರು ಮಂದಿ ತಂಬಾಕು ಸಸಿ ನಾಟಿ ಮಾಡಿ ಗೊಬ್ಬರ ಹಾಕಿದ್ದರು. ಒಂದೇ ಮಳೆಗೆ ಜಮೀನುಗಳಲ್ಲಿ ಕೆರೆ ಸೃಷ್ಟಿಸಿದ ಮಳೆಯು ನೂರಾರು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ತಂಬಾಕು ಸಸಿಯನ್ನು ಮಣ್ಣಿನ ಸಹಿತ ಹೊತ್ತೊಯ್ದಿದೆ. ಅಲ್ಲದೆ ಅಲ್ಲಲ್ಲಿ ಶುಂಠಿ ಬೆಳೆಗೂ ಹಾನಿ ಮಾಡಿದೆ.

ಮುತ್ತುರಾಯನ ಹೊಸಹಳ್ಳಿಯ ರಾಜೇಗೌಡ, ಸಣ್ಣೇಗೌಡ, ರಾಮಚಂದ್ರ, ಬೋರೇಗೌಡ, ಅಶೋಕ, ಲೋಹಿತ್‌ಗೌಡ, ರಾಜಶೇಖರ್, ಶಿವರಾಜೇಗೌಡ, ಅಣ್ಣಾಜಿಗೌಡ ಸೇರಿದಂತೆ ಇತರೆ ರೈತರ ತಂಬಾಕು, ಶುಂಠಿ ಬೆಳೆಯನ್ನು ಗೊಬ್ಬರ ಸಹಿತ ಕೊಚ್ಚಿ ಹಾಕಿದ್ದು, ಲಕ್ಷಾಂತರ ರೂ ನಷ್ಟ ಉಂಟಾಗಿದೆ.

ಕಲ್ಲಹಳ್ಳಿಯ ಬೈಕಟ್ಟೆ, ದೊಡ್ಡಕೆರೆ, ಆಡಿಗನಹಳ್ಳಿಕೆರೆ, ತಾಳೆ ಮಂಡಿಕಟ್ಟೆ, ಹುಣಸೇಗಾಲದ ಕೆರೆ, ಹರೀನಹಳ್ಳಿ, ಕರ್ಣಕುಪ್ಪೆ, ವದ್ಲಿಮನುಗನಹಳ್ಳಿ ಸೇರಿದಂತೆ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿವೆ. ದೊಡ್ಡ ಕೆರೆಗಳಿಗೂ ಸಾಕಷ್ಟು ನೀರು ಹರಿದು ಬಂದಿದೆ. ಮುತ್ತುರಾಯನಹೊಸಹಳ್ಳಿಯ ಸೀತಮ್ಮಮಾದಯ್ಯರ ತೋಟದಲ್ಲಿ ನಿರ್ಮಿಸಿದ್ದ ಕೃಷಿ ಹೊಂಡಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದು ಕಟ್ಟೆಯನ್ನೇ ಒಡೆದು ಹಾಕಿದೆ. ಅಲ್ಲದೆ ತೆಂಗು, ಅಡಿಕೆ ಸಸಿಗಳಿಗೆ ಇತ್ತೀಚೆಗೆ ಹಾಕಿದ್ದ ಟನ್‌ಗಟ್ಟಲೆ ಕೋಳಿ ಗೊಬ್ಬರ, ಕೊಟ್ಟಿಗೆ ಗೊಬ್ಬರವನ್ನೆಲ್ಲಾ ಮಳೆ ನೀರು ಹೊತ್ತೊಯ್ದು ಅಪಾರ ಪ್ರಮಾಣ ನಷ್ಟ ಉಂಟುಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

31 mins ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

52 mins ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

1 hour ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

2 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

2 hours ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

3 hours ago