ಮೈಸೂರು

ಕಳೆಗಟ್ಟಿದ ದಸರಾ | ಫಿರಂಗಿ ಗಾಡಿಗಳಿಗೆ ಪೂಜೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಆರ್.ಎನ್. ಬಿಂದು ಮಣಿ, ಕೆ.ಎಸ್.ಸುಂದರರಾಜ್, ಸಿಎಆರ್ ಡಿಸಿಪಿ ಸಿದ್ದನಗೌಡ ವೈ.ಪಾಟೀಲ್, ಮೌಂಟೆಂಡ್ ಕಮಾಂಡೆಂಟ್ ಎ.ಮಾರುತಿ, ಅರಮನೆ ಮಂಡಳಿ ಉಪ ನಿರ್ದೇಶಕ ಎಂ.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಪಾಲ್ಗೊಂಡಿದ್ದರು.

ಅರಮನೆ ಅರ್ಚಕ ಪ್ರಹ್ಲಾದರಾವ್ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಮೊದಲಿಗೆ ಕುಶಾಲ ತೋಪು ಸಿಡಿಸುವಾಗ ಯಾವುದೇ ಅವಘಡವಾಗದಂತೆ ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸಲಾಯಿತು. ನಂತರ ಚಾಮುಂಡೇಶ್ವರಿ ದೇವತೆ ಸ್ಮರಿಸಲಾಯಿತು. ಮೃತ್ಯುಂಜಯ ಪೂಜೆ ಸಲ್ಲಿಸಿ 9 ಬಾರಿ ಮಂತ್ರಗಳನ್ನು ಆಯುಕ್ತರಿಂದ ಹೇಳಿಸಿ ಮಂಗಳಾರತಿ ಮಾಡಿಸಲಾಯಿತು. ಜಂಬೂಸವಾರಿ ದಿನದಂದು ಅಂಬಾರಿಯಲ್ಲಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವಾಗ 21 ಕುಶಾಲ ತೋಪು ಸಿಡಿಸುವುದು ಸಂಪ್ರದಾಯ. ಅದಕ್ಕಾಗಿ ಪೂರ್ವಭಾವಿಯಾಗಿ ಆನೆಗಳು ಹಾಗೂ ಕುದುರೆಗಳು ಶಬ್ಧಕ್ಕೆ ಬೆಚ್ಚದಂತೆ ಮಾಡಲು ಪೂರ್ವಾಭ್ಯಾಸ ನೀಡಲಾಗುತ್ತದೆ.
ಕುಶಾಲತೋಪು ತಾಲೀಮು ಕೆಲವೇ ದಿನಗಳಿರುವುದರಿಂದ 11 ಫಿರಂಗಿಗಳನ್ನು ಗುರುವಾರ ಸ್ವಚ್ಛಗೊಳಿಸಿದ ಪೊಲೀಸ್ ಸಿಬ್ಬಂದಿ ಪೂಜೆಗೆ ಅಣಿಗೊಳಿಸಿದ್ದರು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮಾತನಾಡಿ, ‘ಜಂಬೂಸವಾರಿ ಮೆರವಣಿಗೆ ದಿನದಂದು ಅರಮನೆ ಹಾಗೂ ಪಂಜಿನ ಕವಾಯತು ಮೈದಾನದಲ್ಲಿ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಸಿಬ್ಬಂದಿಯು ಅದಕ್ಕಾಗಿ ಅಭ್ಯಾಸ ನಡೆಸಲು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ’ ಎಂದರು.

ಮುಂದಿನ ದಿನಗಳಲ್ಲಿ ಅಣಕು ಅಭ್ಯಾಸ (ಒಣತಾಲೀಮು) ನಡೆಯಲಿದೆ. ನಗರ ಸಶಸ್ತ್ರ ಮೀಸಲು ಪಡೆಯ ೩೫ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಲಿದ್ದಾರೆ’ ಎಂದರು. ಅರಮನೆಯಲ್ಲಿ ತಾಲೀಮು ನಡೆಸಲಾಗುತ್ತದೆ. ಗಜಪಡೆಯೊಂದಿಗೆ ತಾಲೀಮು ನಡೆಸುವ ಕುರಿತು ದಿನಾಂಕ ನಿಗದಿಪಡಿಸಿಲ್ಲ. ಸಮಾಲೋಚಿಸಿದ ಬಳಿಕ ನಿರ್ಧರಿಸಲಾಗುವುದು. ಕುಶಾಲತೋಪು ಸಿಡಿಸುವ ತಾಲೀಮನ್ನು ಯಾವ ಸ್ಥಳದಲ್ಲಿ ಮಾಡಬೇಕೆಂಬುದರ ಬಗ್ಗೆ ಚರ್ಚೆ ಮಾಡಿದ ಮೇಲೆ ಹೇಳಲಾಗುವುದು ಎಂದರು.

ಮೈಸೂರು ಅರಮನೆ ಆವರಣದಲ್ಲಿ ಶುಕ್ರವಾರಕುಶಾಲತೋಪುಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಡಿಸಿಪಿಗಳಾದ ಬಿಂದುಮಣಿ, ಕೆ.ಎಸ್.ಸುಂದರರಾಜ್, ಸಿಎಆರ್ ಡಿಸಿಪಿ ಸಿದ್ದನಗೌಡ ವೈ.ಪಾಟೀಲ್, ಮೌಂಟೆಂಡ್ ಕಮಾಂಡೆಂಟ್ ಎ.ಮಾರುತಿ,ಅರಮನೆ ಮಂಡಳಿ ಉಪ ನಿರ್ದೇಶಕ ಎಂ.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

6 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

9 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

10 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

12 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

13 hours ago