ಮೈಸೂರು

ಕಳೆಗಟ್ಟಿದ ದಸರಾ | ಫಿರಂಗಿ ಗಾಡಿಗಳಿಗೆ ಪೂಜೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಆರ್.ಎನ್. ಬಿಂದು ಮಣಿ, ಕೆ.ಎಸ್.ಸುಂದರರಾಜ್, ಸಿಎಆರ್ ಡಿಸಿಪಿ ಸಿದ್ದನಗೌಡ ವೈ.ಪಾಟೀಲ್, ಮೌಂಟೆಂಡ್ ಕಮಾಂಡೆಂಟ್ ಎ.ಮಾರುತಿ, ಅರಮನೆ ಮಂಡಳಿ ಉಪ ನಿರ್ದೇಶಕ ಎಂ.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಪಾಲ್ಗೊಂಡಿದ್ದರು.

ಅರಮನೆ ಅರ್ಚಕ ಪ್ರಹ್ಲಾದರಾವ್ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಮೊದಲಿಗೆ ಕುಶಾಲ ತೋಪು ಸಿಡಿಸುವಾಗ ಯಾವುದೇ ಅವಘಡವಾಗದಂತೆ ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸಲಾಯಿತು. ನಂತರ ಚಾಮುಂಡೇಶ್ವರಿ ದೇವತೆ ಸ್ಮರಿಸಲಾಯಿತು. ಮೃತ್ಯುಂಜಯ ಪೂಜೆ ಸಲ್ಲಿಸಿ 9 ಬಾರಿ ಮಂತ್ರಗಳನ್ನು ಆಯುಕ್ತರಿಂದ ಹೇಳಿಸಿ ಮಂಗಳಾರತಿ ಮಾಡಿಸಲಾಯಿತು. ಜಂಬೂಸವಾರಿ ದಿನದಂದು ಅಂಬಾರಿಯಲ್ಲಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವಾಗ 21 ಕುಶಾಲ ತೋಪು ಸಿಡಿಸುವುದು ಸಂಪ್ರದಾಯ. ಅದಕ್ಕಾಗಿ ಪೂರ್ವಭಾವಿಯಾಗಿ ಆನೆಗಳು ಹಾಗೂ ಕುದುರೆಗಳು ಶಬ್ಧಕ್ಕೆ ಬೆಚ್ಚದಂತೆ ಮಾಡಲು ಪೂರ್ವಾಭ್ಯಾಸ ನೀಡಲಾಗುತ್ತದೆ.
ಕುಶಾಲತೋಪು ತಾಲೀಮು ಕೆಲವೇ ದಿನಗಳಿರುವುದರಿಂದ 11 ಫಿರಂಗಿಗಳನ್ನು ಗುರುವಾರ ಸ್ವಚ್ಛಗೊಳಿಸಿದ ಪೊಲೀಸ್ ಸಿಬ್ಬಂದಿ ಪೂಜೆಗೆ ಅಣಿಗೊಳಿಸಿದ್ದರು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮಾತನಾಡಿ, ‘ಜಂಬೂಸವಾರಿ ಮೆರವಣಿಗೆ ದಿನದಂದು ಅರಮನೆ ಹಾಗೂ ಪಂಜಿನ ಕವಾಯತು ಮೈದಾನದಲ್ಲಿ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಸಿಬ್ಬಂದಿಯು ಅದಕ್ಕಾಗಿ ಅಭ್ಯಾಸ ನಡೆಸಲು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ’ ಎಂದರು.

ಮುಂದಿನ ದಿನಗಳಲ್ಲಿ ಅಣಕು ಅಭ್ಯಾಸ (ಒಣತಾಲೀಮು) ನಡೆಯಲಿದೆ. ನಗರ ಸಶಸ್ತ್ರ ಮೀಸಲು ಪಡೆಯ ೩೫ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಲಿದ್ದಾರೆ’ ಎಂದರು. ಅರಮನೆಯಲ್ಲಿ ತಾಲೀಮು ನಡೆಸಲಾಗುತ್ತದೆ. ಗಜಪಡೆಯೊಂದಿಗೆ ತಾಲೀಮು ನಡೆಸುವ ಕುರಿತು ದಿನಾಂಕ ನಿಗದಿಪಡಿಸಿಲ್ಲ. ಸಮಾಲೋಚಿಸಿದ ಬಳಿಕ ನಿರ್ಧರಿಸಲಾಗುವುದು. ಕುಶಾಲತೋಪು ಸಿಡಿಸುವ ತಾಲೀಮನ್ನು ಯಾವ ಸ್ಥಳದಲ್ಲಿ ಮಾಡಬೇಕೆಂಬುದರ ಬಗ್ಗೆ ಚರ್ಚೆ ಮಾಡಿದ ಮೇಲೆ ಹೇಳಲಾಗುವುದು ಎಂದರು.

ಮೈಸೂರು ಅರಮನೆ ಆವರಣದಲ್ಲಿ ಶುಕ್ರವಾರಕುಶಾಲತೋಪುಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಡಿಸಿಪಿಗಳಾದ ಬಿಂದುಮಣಿ, ಕೆ.ಎಸ್.ಸುಂದರರಾಜ್, ಸಿಎಆರ್ ಡಿಸಿಪಿ ಸಿದ್ದನಗೌಡ ವೈ.ಪಾಟೀಲ್, ಮೌಂಟೆಂಡ್ ಕಮಾಂಡೆಂಟ್ ಎ.ಮಾರುತಿ,ಅರಮನೆ ಮಂಡಳಿ ಉಪ ನಿರ್ದೇಶಕ ಎಂ.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago