ಮೈಸೂರು

ಕಳೆಗಟ್ಟಿದ ದಸರಾ | ಫಿರಂಗಿ ಗಾಡಿಗಳಿಗೆ ಪೂಜೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಆವರಣದಲ್ಲಿ ಶುಕ್ರವಾರ ‘ಕುಶಾಲತೋಪು’ ಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ 11 ಫಿರಂಗಿಗಳಿಗೆ ಪೂಜೆ ಸಲ್ಲಿಸಿದರು. ಡಿಸಿಪಿಗಳಾದ ಆರ್.ಎನ್. ಬಿಂದು ಮಣಿ, ಕೆ.ಎಸ್.ಸುಂದರರಾಜ್, ಸಿಎಆರ್ ಡಿಸಿಪಿ ಸಿದ್ದನಗೌಡ ವೈ.ಪಾಟೀಲ್, ಮೌಂಟೆಂಡ್ ಕಮಾಂಡೆಂಟ್ ಎ.ಮಾರುತಿ, ಅರಮನೆ ಮಂಡಳಿ ಉಪ ನಿರ್ದೇಶಕ ಎಂ.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಪಾಲ್ಗೊಂಡಿದ್ದರು.

ಅರಮನೆ ಅರ್ಚಕ ಪ್ರಹ್ಲಾದರಾವ್ ನೇತೃತ್ವದಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಮೊದಲಿಗೆ ಕುಶಾಲ ತೋಪು ಸಿಡಿಸುವಾಗ ಯಾವುದೇ ಅವಘಡವಾಗದಂತೆ ವಿಘ್ನನಿವಾರಕ ಗಣಪತಿಗೆ ಪೂಜೆ ಸಲ್ಲಿಸಲಾಯಿತು. ನಂತರ ಚಾಮುಂಡೇಶ್ವರಿ ದೇವತೆ ಸ್ಮರಿಸಲಾಯಿತು. ಮೃತ್ಯುಂಜಯ ಪೂಜೆ ಸಲ್ಲಿಸಿ 9 ಬಾರಿ ಮಂತ್ರಗಳನ್ನು ಆಯುಕ್ತರಿಂದ ಹೇಳಿಸಿ ಮಂಗಳಾರತಿ ಮಾಡಿಸಲಾಯಿತು. ಜಂಬೂಸವಾರಿ ದಿನದಂದು ಅಂಬಾರಿಯಲ್ಲಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವಾಗ 21 ಕುಶಾಲ ತೋಪು ಸಿಡಿಸುವುದು ಸಂಪ್ರದಾಯ. ಅದಕ್ಕಾಗಿ ಪೂರ್ವಭಾವಿಯಾಗಿ ಆನೆಗಳು ಹಾಗೂ ಕುದುರೆಗಳು ಶಬ್ಧಕ್ಕೆ ಬೆಚ್ಚದಂತೆ ಮಾಡಲು ಪೂರ್ವಾಭ್ಯಾಸ ನೀಡಲಾಗುತ್ತದೆ.
ಕುಶಾಲತೋಪು ತಾಲೀಮು ಕೆಲವೇ ದಿನಗಳಿರುವುದರಿಂದ 11 ಫಿರಂಗಿಗಳನ್ನು ಗುರುವಾರ ಸ್ವಚ್ಛಗೊಳಿಸಿದ ಪೊಲೀಸ್ ಸಿಬ್ಬಂದಿ ಪೂಜೆಗೆ ಅಣಿಗೊಳಿಸಿದ್ದರು.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮಾತನಾಡಿ, ‘ಜಂಬೂಸವಾರಿ ಮೆರವಣಿಗೆ ದಿನದಂದು ಅರಮನೆ ಹಾಗೂ ಪಂಜಿನ ಕವಾಯತು ಮೈದಾನದಲ್ಲಿ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಸಿಬ್ಬಂದಿಯು ಅದಕ್ಕಾಗಿ ಅಭ್ಯಾಸ ನಡೆಸಲು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ’ ಎಂದರು.

ಮುಂದಿನ ದಿನಗಳಲ್ಲಿ ಅಣಕು ಅಭ್ಯಾಸ (ಒಣತಾಲೀಮು) ನಡೆಯಲಿದೆ. ನಗರ ಸಶಸ್ತ್ರ ಮೀಸಲು ಪಡೆಯ ೩೫ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಲಿದ್ದಾರೆ’ ಎಂದರು. ಅರಮನೆಯಲ್ಲಿ ತಾಲೀಮು ನಡೆಸಲಾಗುತ್ತದೆ. ಗಜಪಡೆಯೊಂದಿಗೆ ತಾಲೀಮು ನಡೆಸುವ ಕುರಿತು ದಿನಾಂಕ ನಿಗದಿಪಡಿಸಿಲ್ಲ. ಸಮಾಲೋಚಿಸಿದ ಬಳಿಕ ನಿರ್ಧರಿಸಲಾಗುವುದು. ಕುಶಾಲತೋಪು ಸಿಡಿಸುವ ತಾಲೀಮನ್ನು ಯಾವ ಸ್ಥಳದಲ್ಲಿ ಮಾಡಬೇಕೆಂಬುದರ ಬಗ್ಗೆ ಚರ್ಚೆ ಮಾಡಿದ ಮೇಲೆ ಹೇಳಲಾಗುವುದು ಎಂದರು.

ಮೈಸೂರು ಅರಮನೆ ಆವರಣದಲ್ಲಿ ಶುಕ್ರವಾರಕುಶಾಲತೋಪುಸಿಡಿಸುವ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಡಿಸಿಪಿಗಳಾದ ಬಿಂದುಮಣಿ, ಕೆ.ಎಸ್.ಸುಂದರರಾಜ್, ಸಿಎಆರ್ ಡಿಸಿಪಿ ಸಿದ್ದನಗೌಡ ವೈ.ಪಾಟೀಲ್, ಮೌಂಟೆಂಡ್ ಕಮಾಂಡೆಂಟ್ ಎ.ಮಾರುತಿ,ಅರಮನೆ ಮಂಡಳಿ ಉಪ ನಿರ್ದೇಶಕ ಎಂ.ಸುಬ್ರಹ್ಮಣ್ಯ, ಎಸಿಪಿ ಚಂದ್ರಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

26 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago