ಮೈಸೂರು

ಸಿಡಿಮದ್ದು ಸ್ಪೋಟಗೊಂಡು ಮಹಿಳೆ ಮುಖ ಛಿದ್ರ

ಮೈಸೂರು : ಸಿಡಿಮದ್ದು ಸ್ಪೋಟಗೊಂಡು ಮಹಿಳೆಯ ಮುಖ ಛಿದ್ರವಾಗಿರುವ ಘಟನೆ ಹುಣಸೂರು ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.

ಕಮಲಮ್ಮ(55) ಗಂಭೀರವಾಗಿ ಗಾಯಗೊಂಡ ಮಹಿಳೆ. ಅಡಿಕೆಕಾಯಿ ಎಂದು ಭಾವಿಸಿ ಮಹಿಳೆ ಸಿಡಿಮದ್ದನ್ನು ಚೆಚ್ಚಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ತೋಟದಲ್ಲಿ ಬಿದ್ದಿದ್ದನ್ನು ಅಡಿಕೆಕಾಯಿ ಎಂದು ಭಾವಿಸಿದ ಮಹಿಳೆ ಚಚ್ಚಿದ್ದಾರೆ. ಈ ವೇಳೆ ಆ ಸಿಡಿಮದ್ದು ಸ್ಪೋಟಗೊಂಡಿದೆ.

ಕಾಡು ಹಂದಿಗಳ ಹಾವಳಿ ತಪ್ಪಿಸಲು ರೈತರು ಸಿಡಿಮದ್ದು ಇಟ್ಟಿದ್ದರು ಎನ್ನಲಾಗಿದೆ. ಈ ಸಿಡಿಮದ್ದನ್ನು ಅಡಿಕೆ ಎಂದು ಭಾವಿಸಿದ ಮಹಿಳೆ ಸುತ್ತಿಗೆಯಿಂದ ಚಚ್ಚಿದ್ದಾರೆ. ಈ ವೇಳೆ ಅದು ಛಿದ್ರಗೊಂಡು ಮುಖ, ಕೈಕಾಲು ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದೆ.

ಗಾಯಾಳು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

6 hours ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

7 hours ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

8 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

8 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

8 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

9 hours ago