ಮೈಸೂರು

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ಸಂವಿಧಾನ ಪುಸ್ತಕ ಹಿಡಿದು ತಿರುಗುತ್ತಿರುವುದು ದುರಂತ : ಸಿ.ಟಿ ರವಿ ಟೀಕೆ

ಹುಣಸೂರು : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ದೇಶವನ್ನು ಕರಾಳ ದಿನಗಳಿಗೆ ದೂಡಿದ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಸ್ವಾರ್ಥಕ್ಕೆ ಸಂವಿಧಾನ ಪುಸ್ತಕ ಹಿಡಿದು ದೇಶ ಪರ್ಯಟನೆ ನಡೆಸುತ್ತಿರುವುದು ದುರಂತದ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಬಿಜೆಪಿ ಜಿಲ್ಲಾ ಗ್ರಾಮಾಂತರ ವಿಭಾಗ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತನ್ನ ರಾಜಕೀಯ ಆಟಕ್ಕೆ ಬಳಸಿಕೊಂಡು ಸಂವಿಧಾನವನ್ನು ತನ್ನ ಚೌಕಟ್ಟಿಗೆ ತಕ್ಕಂತೆ ತಿದ್ದುಪಡಿ ಮಾಡಿ ತುರ್ತು ಪರಿಸ್ಥಿತಿಯ ಲಾಭ ಪಡೆದಿತ್ತು. ಸಾರ್ವಭೌಮತ್ವ ಸಿದ್ಧಾಂತಕ್ಕೆ ಬೆಂಕಿ ಹಚ್ಚಿ ಸಂವಿಧಾನದ ತತ್ವ, ಸಿದ್ಧಾಂತಗಳನ್ನು ಮೂಲೆಗುಂಪು ಮಾಡಿತ್ತು ಎಂದು ದೂರಿದರು.

ತುರ್ತು ಪರಿಸ್ಥಿತಿ ವೇಳೆ ಹಲವು ಕಾಯ್ದೆಗಳಿಗೆ ತಿದ್ದುಪಡಿ ತಂದರು. ಸಂವಿಧಾತ್ಮಕವಾಗಿ ಅಂಬೇಡ್ಕರ್ ನೀಡಿದ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡು ಏಕಚಕ್ರಾಧಿಪತ್ಯ ಆಡಳಿತ ನಡೆಸಿದರು. ಆದರೆ ಅವರ ಪಕ್ಷದವರು ಇಂದು ಸಂವಿಧಾನ ಪೀಠಿಕೆ ಓದಿ ಪ್ರಮಾಣ ಸ್ವೀಕರಿಸಿ ಸಂವಿಧಾನದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.

ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಇದ್ದಲ್ಲಿ ಆಡಳಿತ ಪಕ್ಷಕ್ಕೆ ಗೌರವ. ಆದರೆ ಸಿದ್ದರಾಮಯ್ಯ ಸರ್ಕಾರದಲ್ಲಿ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಅನುದಾನ ನೀಡಿದ್ದು, ವಿರೋಧ ಪಕ್ಷದವರಿಗೆ ಯಾವುದೇ ನೀಡದೆ ತಾರತಮ್ಯ ಎಸಗಿದ್ದಾರೆ. ಇದು ರಾಜ್ಯದಲ್ಲಿನ ಪ್ರಜಾಪ್ರಭುತ್ವದ ವ್ಯವಸ್ಥೆಯಾಗಿದೆ ಎಂದು ಟೀಕಿಸಿದರು.

ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ನಡೆದಿದೆ. ಕಳೆದ 2 ವರ್ಷಗಳಲ್ಲಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಸಂಸದ ಯದುವೀರ್ ಒಡೆಯರ್, ಮಾಜಿ ಶಾಸಕರಾದ ಬಿ.ಹರ್ಷವರ್ಧನ್, ಎಲ್.ನಾಗೇಂದ್ರ ಮಾತನಾಡಿದರು.

ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಬಸವರಾಜಪ್ಪ, ಮಹದೇವಯ್ಯ, ಮಂಗಳ ಸೋಮಶೇಖರ್, ಸೋಮಶೇಖರ್, ಗಣೇಶ್ ಕುಮಾರಸ್ವಾಮಿ, ಚಂದ್ರಶೇಖ, ಪ್ರಫುಲ್ಲ ಮಲ್ಲಾಡಿ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago