ಮೈಸೂರು

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ಸಂವಿಧಾನ ಪುಸ್ತಕ ಹಿಡಿದು ತಿರುಗುತ್ತಿರುವುದು ದುರಂತ : ಸಿ.ಟಿ ರವಿ ಟೀಕೆ

ಹುಣಸೂರು : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ದೇಶವನ್ನು ಕರಾಳ ದಿನಗಳಿಗೆ ದೂಡಿದ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ನಾಯಕರು ಇಂದು ಸ್ವಾರ್ಥಕ್ಕೆ ಸಂವಿಧಾನ ಪುಸ್ತಕ ಹಿಡಿದು ದೇಶ ಪರ್ಯಟನೆ ನಡೆಸುತ್ತಿರುವುದು ದುರಂತದ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಬಿಜೆಪಿ ಜಿಲ್ಲಾ ಗ್ರಾಮಾಂತರ ವಿಭಾಗ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತನ್ನ ರಾಜಕೀಯ ಆಟಕ್ಕೆ ಬಳಸಿಕೊಂಡು ಸಂವಿಧಾನವನ್ನು ತನ್ನ ಚೌಕಟ್ಟಿಗೆ ತಕ್ಕಂತೆ ತಿದ್ದುಪಡಿ ಮಾಡಿ ತುರ್ತು ಪರಿಸ್ಥಿತಿಯ ಲಾಭ ಪಡೆದಿತ್ತು. ಸಾರ್ವಭೌಮತ್ವ ಸಿದ್ಧಾಂತಕ್ಕೆ ಬೆಂಕಿ ಹಚ್ಚಿ ಸಂವಿಧಾನದ ತತ್ವ, ಸಿದ್ಧಾಂತಗಳನ್ನು ಮೂಲೆಗುಂಪು ಮಾಡಿತ್ತು ಎಂದು ದೂರಿದರು.

ತುರ್ತು ಪರಿಸ್ಥಿತಿ ವೇಳೆ ಹಲವು ಕಾಯ್ದೆಗಳಿಗೆ ತಿದ್ದುಪಡಿ ತಂದರು. ಸಂವಿಧಾತ್ಮಕವಾಗಿ ಅಂಬೇಡ್ಕರ್ ನೀಡಿದ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡು ಏಕಚಕ್ರಾಧಿಪತ್ಯ ಆಡಳಿತ ನಡೆಸಿದರು. ಆದರೆ ಅವರ ಪಕ್ಷದವರು ಇಂದು ಸಂವಿಧಾನ ಪೀಠಿಕೆ ಓದಿ ಪ್ರಮಾಣ ಸ್ವೀಕರಿಸಿ ಸಂವಿಧಾನದ ಪಾವಿತ್ರ್ಯತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಕಿಡಿಕಾರಿದರು.

ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಇದ್ದಲ್ಲಿ ಆಡಳಿತ ಪಕ್ಷಕ್ಕೆ ಗೌರವ. ಆದರೆ ಸಿದ್ದರಾಮಯ್ಯ ಸರ್ಕಾರದಲ್ಲಿ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಅನುದಾನ ನೀಡಿದ್ದು, ವಿರೋಧ ಪಕ್ಷದವರಿಗೆ ಯಾವುದೇ ನೀಡದೆ ತಾರತಮ್ಯ ಎಸಗಿದ್ದಾರೆ. ಇದು ರಾಜ್ಯದಲ್ಲಿನ ಪ್ರಜಾಪ್ರಭುತ್ವದ ವ್ಯವಸ್ಥೆಯಾಗಿದೆ ಎಂದು ಟೀಕಿಸಿದರು.

ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ನಡೆದಿದೆ. ಕಳೆದ 2 ವರ್ಷಗಳಲ್ಲಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದರು. ಸಂಸದ ಯದುವೀರ್ ಒಡೆಯರ್, ಮಾಜಿ ಶಾಸಕರಾದ ಬಿ.ಹರ್ಷವರ್ಧನ್, ಎಲ್.ನಾಗೇಂದ್ರ ಮಾತನಾಡಿದರು.

ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಬಸವರಾಜಪ್ಪ, ಮಹದೇವಯ್ಯ, ಮಂಗಳ ಸೋಮಶೇಖರ್, ಸೋಮಶೇಖರ್, ಗಣೇಶ್ ಕುಮಾರಸ್ವಾಮಿ, ಚಂದ್ರಶೇಖ, ಪ್ರಫುಲ್ಲ ಮಲ್ಲಾಡಿ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago