ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ.
ನಗರದ ದೇವರಾಜ ಮಾರುಕಟ್ಟೆಯ ಮಳಿಗೆಗಳು, ಡೊಡ್ಡ ಅಂಗಡಿ, ಚಿಕ್ಕ ಅಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಎಳ್ಳು,ಬೆಲ್ಲ,ಕಬ್ಬ ಮತ್ತು ಬೆಲ್ಲ ಸಹಿತ ಸಕ್ಕರೆ ಅಚ್ಚುಗಳನ್ನು ಮಾರಾಟ ಮಾಡಲಾಗುತ್ತಿದೆ.
ಸ್ನೇಹಿತರು ಹಾಗೂ ಹಿತೈಷಿಗಳ ಮನೆಗಳಿಗೆ ತೆರಳಿ ಎಳ್ಳು,ಬೆಲ್ಲ, ಕಬ್ಬು ವಿನಿಮಯ ಮಾಡಿಕೊಳ್ಳಲು ಮಾರುಕಟ್ಟೆಗೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ.
ಬೆಲೆ ಏರಿಕೆ ಇದ್ದರೂ ಕುಗ್ಗದ ಖರೀದಿ ಭರಾಟೆ
ಇನ್ನೂ ಎಲ್ಲಾ ವಸ್ತುಗಳು ಬೆಲೆಗಳು ತುಸು ಹೆಚ್ಚಾಗಿದ್ದರೂ ಕೂಡ ಜನರಲ್ಲಿ ಹಬ್ಬದ ಉತ್ಸಾಹ ಮಾತ್ರ ಕುಗ್ಗಿಲ್ಲ. ಮಾರುಕಟ್ಟೆಗೆ ತೆರಳಿ ಚೌಕಸಿ ಮಾಡುವ ಮೂಲಕ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಸಂತಸದಿಂದಲೇ ಖರೀದಿಸುತ್ತಿದ್ದದ್ದು ಕಂಡುಬಂತು.
ಬಟ್ಟೆ, ಚಿನ್ನ ಖರೀದಿಯೂ ಜೋರು
ಚಿನ್ನದ ಬೆಲೆ ಗಗನಕ್ಕೇರಿದ್ದರೂ ವರ್ಷದ ಮೊದಲ ಹಬ್ಬಕ್ಕೆ ಚಿನ್ನ ಖರೀದಿಯೂ ಜೋರಿತ್ತು. ಇನ್ನೂ ಬಟ್ಟೆ ವ್ಯಾಪಾರವೂ ಚುರಕಾಗಿಯೇ ಇತ್ತು. ಸಯ್ಯಾಜಿರಾವ್ ರಸ್ತೆ, ಮನ್ನರ್ಸ್ ಮಾರುಕಟ್ಟೆ ಸೇರಿದಂತೆ ವಿವಿಧ ಶಾಪಿಂಗ್ ಕಾಂಪ್ಲೆಕ್ಸ್ಗಳು ತುಂಬಿ ತುಳುಕುತಿದ್ದವು.
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…
ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ…