ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ
ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಾನೂನು ರೀತ್ಯ ಶಿಕ್ಷೆ: ಸಿಎಂ
ಮೈಸೂರು: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
ವಾಕ್ ಸ್ವಾತಂತ್ರ್ಯ ನಮಗೆ ನಮ್ಮ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ
ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.
ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ
ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ನಗರ ಉಪಾಧ್ಯಕ್ಷ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…