ಮೈಸೂರು

ಮೈಸೂರಲ್ಲಿ ಹೆಚ್ಚಿದ ಸೈಬರ್ ವಂಚನೆ ; ನಗರದ ಮೂವರಿಗೆ 1 ಕೋಟಿಗೂ ಹೆಚ್ಚು ದೋಖಾ

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು ಮೂಡಿಸುತ್ತಿದ್ದರು. ಸಾರ್ವಜನಿಕರು ಮಾತ್ರ ಮೋಸ ಹೋಗುವುದು ತಪ್ಪಿಲ್ಲ.

ಇದೀಗ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೆಚ್ಚಿನ ಹಣದ ಆಸೆಗೆ ಬಿದ್ದ ಇಬ್ಬರು ನಕಲಿ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿ 1.52 ಕೋಟಿ ರೂ. ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ನಗರದ ಗಾಯಿತ್ರಿಪುರಂ ನಿವಾಸಿ ಹಾಗೂ ಇಂಜಿನಿಯರ್ ಒಬ್ಬರು ತಮ್ಮ ಮೊಬೈಲ್ ಮೂಲಕ ಇನ್‌ಸ್ಟಾಗ್ರಾಂನಲ್ಲಿ ಜಾಹೀರಾತೊಂದನ್ನು ಗಮನಿಸಿದ್ದಾರೆ. ನಂತರ ಅಲ್ಲಿನ ಆಪ್ಸ್ ಟ್ಯಾಕ್ಸ್ ವ್ಯಾಲ್ಯೂ ಗ್ರೂಪ್‌ಗೆ ಸೇರಿದ್ದಾರೆ.

ಅವರು ಹೇಳಿದಂತೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಆರಂಭಿಸಿದ್ದಾರೆ. ಮೊದಲಿಗೆ ಅವರ ಖಾತೆಯಲ್ಲಿ ಲಾಭಾಂಶ ತೋರಿಸಲಾಗಿದೆ. ಇದರಿಂದ ಉತ್ತೇಜಿತರಾದ ಅವರು ಹಂತಹಂತವಾಗಿ 1,26,85,970 ರೂ. ಅನ್ನು ಅಪರಿಚಿತರ ಖಾತೆಗೆ ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ.

ಎರಡನೇ ಪ್ರಕರಣದಲ್ಲಿ ಟೆಲಿಗ್ರಾಂ ಮೂಲಕ ಜಾಹೀರಾತನ್ನು ಗಮನಿಸಿದ ಕನಕದಾಸ ನಗರ ನಿವಾಸಿ ಯುವಕನೋರ್ವ ಪಾರ್ಟ್ ಟೈಂ ಕೆಲಸಕ್ಕೆ ಸೇರಿದ್ದಾನೆ. ಮೊದಲಿಗೆ ಆತ ಟಾಸ್ಕ್ ಪೂರೈಸಿದ ಹಿನ್ನೆಲೆಯಲ್ಲಿ ನಕಲಿ ಕಂಪೆನಿಯ ಪ್ರತಿನಿಧಿಗಳು ಸ್ವಲ್ಪ ಹಣ ನೀಡಿದ್ದಾರೆ. ನಂತರ ಆತನನ್ನು ಷೇರು ಮಾರುಕಟ್ಟೆಗೆ ಹೂಡುವಂತೆ ಪ್ರೇರೇಪಿಸಿದ್ದಾರೆ. ಅವರ ಮಾತನ್ನು ನಂಬಿದ ಆತ ಹೆಚ್ಚು ಲಾಭದ ಆಸೆಗೆ ಬಿದ್ದು ಹಂತಹಂತವಾಗಿ 15,01,634 ರೂ. ಹಾಕಿ ವಂಚನೆಗೆ ಒಳಗಾಗಿದ್ದಾನೆ. ಈ ಸಂಬಂದ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾವು ಮುಂಬೈ ಪೊಲೀಸರು: ಹೀಗೆ ಹೇಳುವ ಮೂಲಕ ನಿವೃತ್ತ ಅಧಿಕಾರಿಯನ್ನು ಬೆದರಿಸಿದ ದುಷ್ಕರ್ಮಿಗಳು ಅವರಿಂದ ವಿವಿಧ ಖಾತೆಗಳ ಮೂಲಕ 11.80 ಲಕ್ಷ ರೂ. ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ.

ನಾವು ಮುಂಬೈ ಪೊಲೀಸ್ ಠಾಣೆಯಿಂದ ಮಾತನಾಡುತ್ತಿದ್ದೇವೆ. ನೀವು ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದೀರಿ. ಹೀಗಾಗಿ ನಿಮ್ಮ ಖಾತೆಗಳನ್ನು ಸೀಜ್ ಮಾಡಲಾಗುತ್ತದೆ. ನಿಮ್ಮ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡಿ ಎಂದು ಬೆದರಿಸಿ ವಂಚಿಸಿದ್ದಾರೆ.

AddThis Website Tools
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಂಗ್‌ ಕಮಾಂಡರ್‌ ಶೀಲಾದಿತ್ಯ ಬೋಸ್ ಬಂಧನಕ್ಕೆ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಮೇಲೆ ಹಲ್ಲೆ ನಡೆಸಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದಾನೆ.…

28 mins ago

ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

  ನವದೆಹಲಿ: ಕೊರೊನಾ ವೈರಸ್ ಪರಿಣಾಮದಿಂದಾಗಿ ಸರಿಸುಮಾರು ಕಳೆದ ಐದು ವರ್ಷಗಳಿಂದ ನಿಂತು ಹೋಗಿದ್ದ ಕೈಲಾಸ ಮಾನಸ ಸರೋವರ ಯಾತ್ರೆ…

40 mins ago

ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸಿ: ಸರ್ಕಾರಕ್ಕೆ ಜೆಡಿಎಸ್‌ ಆಗ್ರಹ

ಬೆಂಗಳೂರು: ಹೆಚ್ಚುತ್ತಿರುವ ವಲಸಿಗರ ಹಾವಳಿ, ಕನ್ನಡಿಗರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಹೊಸ ಕಾನೂನನ್ನು ಅತ್ಯವಶ್ಯಕವಾಗಿ ರೂಪಿಸಬೇಕು ಎಂದು ಜೆಡಿಎಸ್ ರಾಜ್ಯ…

45 mins ago

ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಕೇಂದ್ರದ ಹಿಂದಿ ಹೇರಿಕೆಯನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ…

1 hour ago

ಚಾಮುಂಡಿಬೆಟ್ಟದಲ್ಲಿ ಯುವಕರಿಂದ ಅಸಭ್ಯ ವರ್ತನೆ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಬಟ್ಟೆ ತೆಗೆದು ಅನುಚಿತವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…

1 hour ago

ಏಪ್ರಿಲ್.‌24ರಂದು ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್: 2 ಸಾವಿರ ಪೊಲೀಸರ ನಿಯೋಜನೆ

ಚಾಮರಾಜನಗರ: ಇದೇ ಏಪ್ರಿಲ್.‌24ರಂದು ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ…

1 hour ago