ಮೈಸೂರು

ಮೈಸೂರಲ್ಲಿ ಹೆಚ್ಚಿದ ಸೈಬರ್ ವಂಚನೆ ; ನಗರದ ಮೂವರಿಗೆ 1 ಕೋಟಿಗೂ ಹೆಚ್ಚು ದೋಖಾ

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು ಮೂಡಿಸುತ್ತಿದ್ದರು. ಸಾರ್ವಜನಿಕರು ಮಾತ್ರ ಮೋಸ ಹೋಗುವುದು ತಪ್ಪಿಲ್ಲ.

ಇದೀಗ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೆಚ್ಚಿನ ಹಣದ ಆಸೆಗೆ ಬಿದ್ದ ಇಬ್ಬರು ನಕಲಿ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿ 1.52 ಕೋಟಿ ರೂ. ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ನಗರದ ಗಾಯಿತ್ರಿಪುರಂ ನಿವಾಸಿ ಹಾಗೂ ಇಂಜಿನಿಯರ್ ಒಬ್ಬರು ತಮ್ಮ ಮೊಬೈಲ್ ಮೂಲಕ ಇನ್‌ಸ್ಟಾಗ್ರಾಂನಲ್ಲಿ ಜಾಹೀರಾತೊಂದನ್ನು ಗಮನಿಸಿದ್ದಾರೆ. ನಂತರ ಅಲ್ಲಿನ ಆಪ್ಸ್ ಟ್ಯಾಕ್ಸ್ ವ್ಯಾಲ್ಯೂ ಗ್ರೂಪ್‌ಗೆ ಸೇರಿದ್ದಾರೆ.

ಅವರು ಹೇಳಿದಂತೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಆರಂಭಿಸಿದ್ದಾರೆ. ಮೊದಲಿಗೆ ಅವರ ಖಾತೆಯಲ್ಲಿ ಲಾಭಾಂಶ ತೋರಿಸಲಾಗಿದೆ. ಇದರಿಂದ ಉತ್ತೇಜಿತರಾದ ಅವರು ಹಂತಹಂತವಾಗಿ 1,26,85,970 ರೂ. ಅನ್ನು ಅಪರಿಚಿತರ ಖಾತೆಗೆ ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ.

ಎರಡನೇ ಪ್ರಕರಣದಲ್ಲಿ ಟೆಲಿಗ್ರಾಂ ಮೂಲಕ ಜಾಹೀರಾತನ್ನು ಗಮನಿಸಿದ ಕನಕದಾಸ ನಗರ ನಿವಾಸಿ ಯುವಕನೋರ್ವ ಪಾರ್ಟ್ ಟೈಂ ಕೆಲಸಕ್ಕೆ ಸೇರಿದ್ದಾನೆ. ಮೊದಲಿಗೆ ಆತ ಟಾಸ್ಕ್ ಪೂರೈಸಿದ ಹಿನ್ನೆಲೆಯಲ್ಲಿ ನಕಲಿ ಕಂಪೆನಿಯ ಪ್ರತಿನಿಧಿಗಳು ಸ್ವಲ್ಪ ಹಣ ನೀಡಿದ್ದಾರೆ. ನಂತರ ಆತನನ್ನು ಷೇರು ಮಾರುಕಟ್ಟೆಗೆ ಹೂಡುವಂತೆ ಪ್ರೇರೇಪಿಸಿದ್ದಾರೆ. ಅವರ ಮಾತನ್ನು ನಂಬಿದ ಆತ ಹೆಚ್ಚು ಲಾಭದ ಆಸೆಗೆ ಬಿದ್ದು ಹಂತಹಂತವಾಗಿ 15,01,634 ರೂ. ಹಾಕಿ ವಂಚನೆಗೆ ಒಳಗಾಗಿದ್ದಾನೆ. ಈ ಸಂಬಂದ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾವು ಮುಂಬೈ ಪೊಲೀಸರು: ಹೀಗೆ ಹೇಳುವ ಮೂಲಕ ನಿವೃತ್ತ ಅಧಿಕಾರಿಯನ್ನು ಬೆದರಿಸಿದ ದುಷ್ಕರ್ಮಿಗಳು ಅವರಿಂದ ವಿವಿಧ ಖಾತೆಗಳ ಮೂಲಕ 11.80 ಲಕ್ಷ ರೂ. ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ.

ನಾವು ಮುಂಬೈ ಪೊಲೀಸ್ ಠಾಣೆಯಿಂದ ಮಾತನಾಡುತ್ತಿದ್ದೇವೆ. ನೀವು ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದೀರಿ. ಹೀಗಾಗಿ ನಿಮ್ಮ ಖಾತೆಗಳನ್ನು ಸೀಜ್ ಮಾಡಲಾಗುತ್ತದೆ. ನಿಮ್ಮ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡಿ ಎಂದು ಬೆದರಿಸಿ ವಂಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

14 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

50 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

1 hour ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

2 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago