ಮೈಸೂರು

ಮೈಸೂರಲ್ಲಿ ಹೆಚ್ಚಿದ ಸೈಬರ್ ವಂಚನೆ ; ನಗರದ ಮೂವರಿಗೆ 1 ಕೋಟಿಗೂ ಹೆಚ್ಚು ದೋಖಾ

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು ಮೂಡಿಸುತ್ತಿದ್ದರು. ಸಾರ್ವಜನಿಕರು ಮಾತ್ರ ಮೋಸ ಹೋಗುವುದು ತಪ್ಪಿಲ್ಲ.

ಇದೀಗ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೆಚ್ಚಿನ ಹಣದ ಆಸೆಗೆ ಬಿದ್ದ ಇಬ್ಬರು ನಕಲಿ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿ 1.52 ಕೋಟಿ ರೂ. ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ನಗರದ ಗಾಯಿತ್ರಿಪುರಂ ನಿವಾಸಿ ಹಾಗೂ ಇಂಜಿನಿಯರ್ ಒಬ್ಬರು ತಮ್ಮ ಮೊಬೈಲ್ ಮೂಲಕ ಇನ್‌ಸ್ಟಾಗ್ರಾಂನಲ್ಲಿ ಜಾಹೀರಾತೊಂದನ್ನು ಗಮನಿಸಿದ್ದಾರೆ. ನಂತರ ಅಲ್ಲಿನ ಆಪ್ಸ್ ಟ್ಯಾಕ್ಸ್ ವ್ಯಾಲ್ಯೂ ಗ್ರೂಪ್‌ಗೆ ಸೇರಿದ್ದಾರೆ.

ಅವರು ಹೇಳಿದಂತೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಆರಂಭಿಸಿದ್ದಾರೆ. ಮೊದಲಿಗೆ ಅವರ ಖಾತೆಯಲ್ಲಿ ಲಾಭಾಂಶ ತೋರಿಸಲಾಗಿದೆ. ಇದರಿಂದ ಉತ್ತೇಜಿತರಾದ ಅವರು ಹಂತಹಂತವಾಗಿ 1,26,85,970 ರೂ. ಅನ್ನು ಅಪರಿಚಿತರ ಖಾತೆಗೆ ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ.

ಎರಡನೇ ಪ್ರಕರಣದಲ್ಲಿ ಟೆಲಿಗ್ರಾಂ ಮೂಲಕ ಜಾಹೀರಾತನ್ನು ಗಮನಿಸಿದ ಕನಕದಾಸ ನಗರ ನಿವಾಸಿ ಯುವಕನೋರ್ವ ಪಾರ್ಟ್ ಟೈಂ ಕೆಲಸಕ್ಕೆ ಸೇರಿದ್ದಾನೆ. ಮೊದಲಿಗೆ ಆತ ಟಾಸ್ಕ್ ಪೂರೈಸಿದ ಹಿನ್ನೆಲೆಯಲ್ಲಿ ನಕಲಿ ಕಂಪೆನಿಯ ಪ್ರತಿನಿಧಿಗಳು ಸ್ವಲ್ಪ ಹಣ ನೀಡಿದ್ದಾರೆ. ನಂತರ ಆತನನ್ನು ಷೇರು ಮಾರುಕಟ್ಟೆಗೆ ಹೂಡುವಂತೆ ಪ್ರೇರೇಪಿಸಿದ್ದಾರೆ. ಅವರ ಮಾತನ್ನು ನಂಬಿದ ಆತ ಹೆಚ್ಚು ಲಾಭದ ಆಸೆಗೆ ಬಿದ್ದು ಹಂತಹಂತವಾಗಿ 15,01,634 ರೂ. ಹಾಕಿ ವಂಚನೆಗೆ ಒಳಗಾಗಿದ್ದಾನೆ. ಈ ಸಂಬಂದ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾವು ಮುಂಬೈ ಪೊಲೀಸರು: ಹೀಗೆ ಹೇಳುವ ಮೂಲಕ ನಿವೃತ್ತ ಅಧಿಕಾರಿಯನ್ನು ಬೆದರಿಸಿದ ದುಷ್ಕರ್ಮಿಗಳು ಅವರಿಂದ ವಿವಿಧ ಖಾತೆಗಳ ಮೂಲಕ 11.80 ಲಕ್ಷ ರೂ. ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ.

ನಾವು ಮುಂಬೈ ಪೊಲೀಸ್ ಠಾಣೆಯಿಂದ ಮಾತನಾಡುತ್ತಿದ್ದೇವೆ. ನೀವು ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದೀರಿ. ಹೀಗಾಗಿ ನಿಮ್ಮ ಖಾತೆಗಳನ್ನು ಸೀಜ್ ಮಾಡಲಾಗುತ್ತದೆ. ನಿಮ್ಮ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡಿ ಎಂದು ಬೆದರಿಸಿ ವಂಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

7 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

8 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

10 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

10 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

13 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

14 hours ago