ಮೈಸೂರು

ಮೈಸೂರಲ್ಲಿ ಹೆಚ್ಚಿದ ಸೈಬರ್ ವಂಚನೆ ; ನಗರದ ಮೂವರಿಗೆ 1 ಕೋಟಿಗೂ ಹೆಚ್ಚು ದೋಖಾ

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು ಮೂಡಿಸುತ್ತಿದ್ದರು. ಸಾರ್ವಜನಿಕರು ಮಾತ್ರ ಮೋಸ ಹೋಗುವುದು ತಪ್ಪಿಲ್ಲ.

ಇದೀಗ ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೆಚ್ಚಿನ ಹಣದ ಆಸೆಗೆ ಬಿದ್ದ ಇಬ್ಬರು ನಕಲಿ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿ 1.52 ಕೋಟಿ ರೂ. ಕಳೆದುಕೊಂಡಿದ್ದಾರೆ.

ಮೊದಲ ಪ್ರಕರಣದಲ್ಲಿ ನಗರದ ಗಾಯಿತ್ರಿಪುರಂ ನಿವಾಸಿ ಹಾಗೂ ಇಂಜಿನಿಯರ್ ಒಬ್ಬರು ತಮ್ಮ ಮೊಬೈಲ್ ಮೂಲಕ ಇನ್‌ಸ್ಟಾಗ್ರಾಂನಲ್ಲಿ ಜಾಹೀರಾತೊಂದನ್ನು ಗಮನಿಸಿದ್ದಾರೆ. ನಂತರ ಅಲ್ಲಿನ ಆಪ್ಸ್ ಟ್ಯಾಕ್ಸ್ ವ್ಯಾಲ್ಯೂ ಗ್ರೂಪ್‌ಗೆ ಸೇರಿದ್ದಾರೆ.

ಅವರು ಹೇಳಿದಂತೆ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಆರಂಭಿಸಿದ್ದಾರೆ. ಮೊದಲಿಗೆ ಅವರ ಖಾತೆಯಲ್ಲಿ ಲಾಭಾಂಶ ತೋರಿಸಲಾಗಿದೆ. ಇದರಿಂದ ಉತ್ತೇಜಿತರಾದ ಅವರು ಹಂತಹಂತವಾಗಿ 1,26,85,970 ರೂ. ಅನ್ನು ಅಪರಿಚಿತರ ಖಾತೆಗೆ ಜಮೆ ಮಾಡಿ ವಂಚನೆಗೆ ಒಳಗಾಗಿದ್ದಾರೆ.

ಎರಡನೇ ಪ್ರಕರಣದಲ್ಲಿ ಟೆಲಿಗ್ರಾಂ ಮೂಲಕ ಜಾಹೀರಾತನ್ನು ಗಮನಿಸಿದ ಕನಕದಾಸ ನಗರ ನಿವಾಸಿ ಯುವಕನೋರ್ವ ಪಾರ್ಟ್ ಟೈಂ ಕೆಲಸಕ್ಕೆ ಸೇರಿದ್ದಾನೆ. ಮೊದಲಿಗೆ ಆತ ಟಾಸ್ಕ್ ಪೂರೈಸಿದ ಹಿನ್ನೆಲೆಯಲ್ಲಿ ನಕಲಿ ಕಂಪೆನಿಯ ಪ್ರತಿನಿಧಿಗಳು ಸ್ವಲ್ಪ ಹಣ ನೀಡಿದ್ದಾರೆ. ನಂತರ ಆತನನ್ನು ಷೇರು ಮಾರುಕಟ್ಟೆಗೆ ಹೂಡುವಂತೆ ಪ್ರೇರೇಪಿಸಿದ್ದಾರೆ. ಅವರ ಮಾತನ್ನು ನಂಬಿದ ಆತ ಹೆಚ್ಚು ಲಾಭದ ಆಸೆಗೆ ಬಿದ್ದು ಹಂತಹಂತವಾಗಿ 15,01,634 ರೂ. ಹಾಕಿ ವಂಚನೆಗೆ ಒಳಗಾಗಿದ್ದಾನೆ. ಈ ಸಂಬಂದ ಸೈಬರ್ ಅಪರಾಧ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾವು ಮುಂಬೈ ಪೊಲೀಸರು: ಹೀಗೆ ಹೇಳುವ ಮೂಲಕ ನಿವೃತ್ತ ಅಧಿಕಾರಿಯನ್ನು ಬೆದರಿಸಿದ ದುಷ್ಕರ್ಮಿಗಳು ಅವರಿಂದ ವಿವಿಧ ಖಾತೆಗಳ ಮೂಲಕ 11.80 ಲಕ್ಷ ರೂ. ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ.

ನಾವು ಮುಂಬೈ ಪೊಲೀಸ್ ಠಾಣೆಯಿಂದ ಮಾತನಾಡುತ್ತಿದ್ದೇವೆ. ನೀವು ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದೀರಿ. ಹೀಗಾಗಿ ನಿಮ್ಮ ಖಾತೆಗಳನ್ನು ಸೀಜ್ ಮಾಡಲಾಗುತ್ತದೆ. ನಿಮ್ಮ ಖಾತೆಯಲ್ಲಿರುವ ಹಣವನ್ನು ವರ್ಗಾವಣೆ ಮಾಡಿ ಎಂದು ಬೆದರಿಸಿ ವಂಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

26 mins ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

31 mins ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

51 mins ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

2 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

2 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

2 hours ago