ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ ತಿಳಿಸಿದರು.
ಇಂದು(ಏ.2) ನಗರ ಶಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಏಕೀಕರಣದ ನಂತರ ಮೈಸೂರು ರಾಜ್ಯದಲ್ಲಿ ಪೊಲೀಸ್ ಧ್ವಜ ವಿಭಿನ್ನವಾಗಿದ್ದವು. ಅದನ್ನು ಮಾರ್ಪಡಿಸಿ 1960 ರಲ್ಲಿ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೊಳಿಸಿ ನಿವೃತ್ತ ಪೊಲೀಸರ ಕಲ್ಯಾಣ ನಿಧಿ ಜಾರಿಗೊಳಿಸಲಾಯಿತು ಎಂದರು.
ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ಧಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು. ಆರೋಗ್ಯ ಸಮಸ್ಯೆಗಳೂ ಬೇಗ ಬರುತ್ತವೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾರ್ವಜನಿಕ ಜೀವನದಲ್ಲಿ ನಡೆದುಕೊಳ್ಳುವ ರೀತಿ ಮುಖ್ಯ. ಈ ದಿನಗಳಲ್ಲಿ ರಾಜಕೀಯ ಗೊಂದಲ, ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು. ನಿವೃತ್ತ ಅಧಿಕಾರಿಗಳ ಪಟ್ಟಿ ಠಾಣಾ ಮಟ್ಟದಲ್ಲಿ ನಿರ್ವಹಣೆ ಆಗಬೇಕು. ನಿವೃತ್ತರನ್ನು ಗೌರವಿಸಬೇಕು ಎಂದರು.
ಪ್ರಧಾನ ದಳಪತಿ ಸಹಾಯಕ ಕಮಾಂಡರ್ ರಾಜು.ಎಂ ತುಕಡಿಗಳ ಪರಿವೀಕ್ಷಣೆಗೆ ಕರೆದೊಯ್ದರು. ತೆರೆದ ವಾಹನದಲ್ಲಿ ಪರಿವೀಕ್ಷಣೆ ಮಾಡಲಾಯಿತು. ನಗರ, ಜಿಲ್ಲಾ ಶಸಸ್ತ್ರ ಮೀಸಲು ಪಡೆ, ನಗರ ನಾಗರಿಕ ಪೊಲೀಸ್, ಸಂಚಾರ ವಿಭಾಗ, ಅಶ್ವರೋಹಿ ದಳದಿಂದ 10 ತಂಡಗಳಿಂದ ಪಥಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ವಲಯದ ಐ.ಜಿ.ಪಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರ ಡಿ ಸಿ ಪಿ ಮುತ್ತುರಾಜ್, ಎಸ್.ಜಾಹ್ನವಿ, ಎಡಿಎಸ್ಪಿ ನಾಗೇಶ್, ಕಮಾಂಡೆಂಟ್ ಶೈಲೇಂದ್ರ, ಕೆಪಿಎ ನಿರ್ದೇಶಕ ಚನ್ನಬಸವಣ್ಣ, ಸೆಸ್ಕಾಂ ನ ಎ ಎಸ್ಪಿ ಸವಿತಾ ಹೂಗಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…