ಮೈಸೂರು

ಸೈಬರ್‌ ಅಪರಾಧ : ಯುವ ಅಧಿಕಾರಿಗಳಿಗೆ ಭೇದಿಸುವ ಶಕ್ತಿ ಇರಲಿ

ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ  ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ  ತಿಳಿಸಿದರು.

ಇಂದು(ಏ.2) ನಗರ ಶಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣದ ನಂತರ ಮೈಸೂರು ರಾಜ್ಯದಲ್ಲಿ ಪೊಲೀಸ್ ಧ್ವಜ ವಿಭಿನ್ನವಾಗಿದ್ದವು. ಅದನ್ನು ಮಾರ್ಪಡಿಸಿ 1960 ರಲ್ಲಿ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೊಳಿಸಿ ನಿವೃತ್ತ ಪೊಲೀಸರ ಕಲ್ಯಾಣ ನಿಧಿ ಜಾರಿಗೊಳಿಸಲಾಯಿತು ಎಂದರು.

ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ಧಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು. ಆರೋಗ್ಯ ಸಮಸ್ಯೆಗಳೂ ಬೇಗ ಬರುತ್ತವೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾರ್ವಜನಿಕ ಜೀವನದಲ್ಲಿ ನಡೆದುಕೊಳ್ಳುವ ರೀತಿ ಮುಖ್ಯ. ಈ ದಿನಗಳಲ್ಲಿ ರಾಜಕೀಯ ಗೊಂದಲ, ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು. ನಿವೃತ್ತ ಅಧಿಕಾರಿಗಳ ಪಟ್ಟಿ ಠಾಣಾ ಮಟ್ಟದಲ್ಲಿ ನಿರ್ವಹಣೆ ಆಗಬೇಕು. ನಿವೃತ್ತರನ್ನು ಗೌರವಿಸಬೇಕು ಎಂದರು.

ಪ್ರಧಾನ ದಳಪತಿ ಸಹಾಯಕ ಕಮಾಂಡರ್ ರಾಜು.ಎಂ ತುಕಡಿಗಳ ಪರಿವೀಕ್ಷಣೆಗೆ ಕರೆದೊಯ್ದರು. ತೆರೆದ ವಾಹನದಲ್ಲಿ ಪರಿವೀಕ್ಷಣೆ ಮಾಡಲಾಯಿತು. ನಗರ, ಜಿಲ್ಲಾ ಶಸಸ್ತ್ರ ಮೀಸಲು ಪಡೆ, ನಗರ ನಾಗರಿಕ ಪೊಲೀಸ್, ಸಂಚಾರ ವಿಭಾಗ, ಅಶ್ವರೋಹಿ ದಳದಿಂದ 10 ತಂಡಗಳಿಂದ ಪಥಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ವಲಯದ ಐ.ಜಿ.ಪಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರ ಡಿ ಸಿ ಪಿ ಮುತ್ತುರಾಜ್, ಎಸ್.ಜಾಹ್ನವಿ, ಎಡಿಎಸ್ಪಿ ನಾಗೇಶ್, ಕಮಾಂಡೆಂಟ್ ಶೈಲೇಂದ್ರ, ಕೆಪಿಎ ನಿರ್ದೇಶಕ ಚನ್ನಬಸವಣ್ಣ, ಸೆಸ್ಕಾಂ ನ ಎ ಎಸ್ಪಿ ಸವಿತಾ ಹೂಗಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

2 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

6 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

6 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

6 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

6 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago