ಮೈಸೂರು

ಸೈಬರ್‌ ಅಪರಾಧ : ಯುವ ಅಧಿಕಾರಿಗಳಿಗೆ ಭೇದಿಸುವ ಶಕ್ತಿ ಇರಲಿ

ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ  ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ  ತಿಳಿಸಿದರು.

ಇಂದು(ಏ.2) ನಗರ ಶಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣದ ನಂತರ ಮೈಸೂರು ರಾಜ್ಯದಲ್ಲಿ ಪೊಲೀಸ್ ಧ್ವಜ ವಿಭಿನ್ನವಾಗಿದ್ದವು. ಅದನ್ನು ಮಾರ್ಪಡಿಸಿ 1960 ರಲ್ಲಿ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೊಳಿಸಿ ನಿವೃತ್ತ ಪೊಲೀಸರ ಕಲ್ಯಾಣ ನಿಧಿ ಜಾರಿಗೊಳಿಸಲಾಯಿತು ಎಂದರು.

ಬೇರೆ ಇಲಾಖೆಗಳಿಗಿಂತ ಪೊಲೀಸ್ ಇಲಾಖೆ ಭಿನ್ನ. ಇಲ್ಲಿ ಕೆಲಸಕ್ಕೆ ನಿರ್ಧಿಷ್ಟ ಸಮಯ ಇರುವುದಿಲ್ಲ. ಎಲ್ಲಾ ಸಂದರ್ಭದಲ್ಲೂ ತಯಾರಿರಬೇಕು. ಆರೋಗ್ಯ ಸಮಸ್ಯೆಗಳೂ ಬೇಗ ಬರುತ್ತವೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾರ್ವಜನಿಕ ಜೀವನದಲ್ಲಿ ನಡೆದುಕೊಳ್ಳುವ ರೀತಿ ಮುಖ್ಯ. ಈ ದಿನಗಳಲ್ಲಿ ರಾಜಕೀಯ ಗೊಂದಲ, ಸೈಬರ್ ಅಪರಾಧಗಳನ್ನು ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು. ನಿವೃತ್ತ ಅಧಿಕಾರಿಗಳ ಪಟ್ಟಿ ಠಾಣಾ ಮಟ್ಟದಲ್ಲಿ ನಿರ್ವಹಣೆ ಆಗಬೇಕು. ನಿವೃತ್ತರನ್ನು ಗೌರವಿಸಬೇಕು ಎಂದರು.

ಪ್ರಧಾನ ದಳಪತಿ ಸಹಾಯಕ ಕಮಾಂಡರ್ ರಾಜು.ಎಂ ತುಕಡಿಗಳ ಪರಿವೀಕ್ಷಣೆಗೆ ಕರೆದೊಯ್ದರು. ತೆರೆದ ವಾಹನದಲ್ಲಿ ಪರಿವೀಕ್ಷಣೆ ಮಾಡಲಾಯಿತು. ನಗರ, ಜಿಲ್ಲಾ ಶಸಸ್ತ್ರ ಮೀಸಲು ಪಡೆ, ನಗರ ನಾಗರಿಕ ಪೊಲೀಸ್, ಸಂಚಾರ ವಿಭಾಗ, ಅಶ್ವರೋಹಿ ದಳದಿಂದ 10 ತಂಡಗಳಿಂದ ಪಥಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ದಕ್ಷಿಣ ವಲಯದ ಐ.ಜಿ.ಪಿ ಬೋರಲಿಂಗಯ್ಯ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ನಗರ ಡಿ ಸಿ ಪಿ ಮುತ್ತುರಾಜ್, ಎಸ್.ಜಾಹ್ನವಿ, ಎಡಿಎಸ್ಪಿ ನಾಗೇಶ್, ಕಮಾಂಡೆಂಟ್ ಶೈಲೇಂದ್ರ, ಕೆಪಿಎ ನಿರ್ದೇಶಕ ಚನ್ನಬಸವಣ್ಣ, ಸೆಸ್ಕಾಂ ನ ಎ ಎಸ್ಪಿ ಸವಿತಾ ಹೂಗಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago