ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿ ಗಂಭೀರವಾಗಿ ಗಾಯಗೊಂಡು ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಹಿಳೆ ಮಂಜುಳಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನೆನ್ನೆ ತಡ ರಾತ್ರಿ ಅರಮನೆಯ ಜಯಮಾರ್ತಾಂಡ ಗೇಟ್ ಸಮೀಪ ನಡೆದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟದಲ್ಲಿ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಹಿನ್ನೆಲೆಯಲ್ಲಿ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಮಂಜುಳಾ ಮೂಲತಃ ನಂಜನಗೂಡು ನಿವಾಸಿಯಾಗಿದ್ದು, ಹೂವಿನ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ. ಈ ಸ್ಫೋಟದಲ್ಲಿ ಈಗಾಗಲೇ ಬಲೂನ್ ವ್ಯಾಪಾರಿ ಸಲೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುಳಾ ಸಾವಿನೊಂದಿಗೆ ಈ ಗ್ಯಾಸ್ ಬ್ಲಾಸ್ಟ್ ದುರಂತದಲ್ಲಿ ಒಟ್ಟು ಇಬ್ಬರು ಪ್ರಾಣ ಕಳೆದುಕೊಂಡಂತಾಗಿದೆ.
ಘಟನೆಗೆ ಸಂಬಂಧಿಸಿ ಇನ್ನೂ ಕೆಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…
ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…