ಮೈಸೂರು

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ತನಿಖೆ ಮಾಹಿತಿಯನ್ನು ಎನ್‌ಐಎ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಶೀಘ್ರವೇ ವರದಿ ಸಲ್ಲಿಸಲಿದ್ದಾರೆ. ಘಟನೆಯಲ್ಲಿ ಮೃತಪಟ್ಟಿರುವ ಸಲೀಂ, ಇಲ್ಲಿಗೆ ಬರುವ ಮುನ್ನ ಉತ್ತರಪ್ರದೇಶ, ಹೈದರಾಬಾದ್‌ನಲ್ಲಿ ಬಲೂನ್ ಮಾರಾಟ ಮಾಡಿದ್ದನು. ಕಳೆದ ತಿಂಗಳಷ್ಟೇ ಆತ ಮೈಸೂರಿಗೆ ಬಂದಿದ್ದ ಬಲೂನ್ ಮಾರಾಟ ಸೇರಿದಂತೆ ಸಣ್ಣಪುಟ್ಟ ವಸ್ತುಗಳ ಮಾರಾಟ ಆತನ ಕಾಯಕ.

ಸಲೀಂ ಜೊತೆ ಬಂದಿದ್ದ ಸ್ನೇಹಿತರಾದ ರಿಜ್ವಾನ್ ಅಲಿಯಾಸ್ ರಾಜು ಹಾಗೂ ಹುಸೇನ್ ಅಲಿಯಾಸ್ ಸಿಂಗ್, ಸುನೀಲ್ ಸಿಂಗ್ ಅವರುಗಳಿಂದ ಪೊಲೀಸರು ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಿದ್ದಾರೆ.

ಘಟನೆ ಕುರಿತು ಮಾತನಾಡಿರುವ ಸುನ್ನಿಚೌಕದ ಷರೀಫ್ ಲಾಡ್ಜ್ ಮಾಲೀಕ ಅಮಾನ್, ಸಲೀಂ ಹಾಗೂ ಅವರ ಸಂಬಂಧಿಕರು ಹಲವಾರು ವರ್ಷದಿಂದ ಮೈಸೂರಿಗೆ ಬರುತ್ತಿದ್ದರು. ದಸರಾ, ಹಬ್ಬ ಹರಿದಿನಗಳಲ್ಲಿ ಬರುತ್ತಿದ್ದರು. ಒಬ್ಬರಿಗೆ ಒಂದು ದಿನಕ್ಕೆ ನೂರು ರೂಪಾಯಿಯ ಬಾಡಿಗೆಯಲ್ಲಿ ಕೊಠಡಿ ಕೊಡುತ್ತಿದ್ದೆವು ಎಂದಿದ್ದಾರೆ.

ಒಂದೇ ಕೊಠಡಿಯಲ್ಲಿ ನಾಲ್ವರು ಉಳಿದುಕೊಳ್ಳುತ್ತಿದ್ದರು. ಒಮ್ಮೊಮ್ಮೆ ಎರಡು ಕೊಠಡಿಯಲ್ಲಿ ನಾಲ್ವರು ಇರುತ್ತಿದ್ದರು. ವ್ಯಾಪಾರವಾದರೆ ಆ ಹಣವನ್ನು ಕೊಡುತ್ತಿದ್ದರು. ಇಲ್ಲವಾದರೆ ಅದನ್ನೂ ಅವರು ಕೊಡುತ್ತಿರಲಿಲ್ಲ. ನಾವು ಕೂಡ ಹಣಕ್ಕಾಗಿ ಒತ್ತಾಯ ಮಾಡುತ್ತಿರಲಿಲ್ಲ ಎಂದು ವಿಚಾರಣೆ ವೇಳೆ ತಿಳಿಸಿದ್ದಾರೆ.

ಅವರುಗಳು ಸೈಕಲ್ ಮೂಲಕವೇ ಸಂಚರಿಸುತ್ತಿದ್ದರು. ಸೈಕಲ್ ಇಲ್ಲೇ ಇರುತ್ತಿದ್ದವು. ಬಲೂನ್ ಮಾರಿದ ಮೇಲೆ ಸೈಕಲ್ ಬಿಟ್ಟು ಹೋಗುವುದು, ಬರುವುದು ಮಾಡುತ್ತಿದ್ದರು. ಸಿಲಿಂಡರ್‌ಗಳನ್ನು ಶೆಡ್‌ಗಳಲ್ಲಿ ಬಾಡಿಗೆಗೆ ಇಟ್ಟು ಬರುತ್ತಿದ್ದರು. ಯಾವತ್ತೂ ಲಾಡ್ಜ್ ಬಳಿಗೆ ಅವರು ತರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಲಾಡ್ಜ್‌ಗಳ ಮೇಲೆ ಪೊಲೀಸರ ನಿಗಾ  

ಗ್ಯಾಸ್ ಸಿಲಿಂಡರ್ ಸೋಟ ಪ್ರಕರಣ ಬೆನ್ನಲ್ಲೆ ನಗರದ ಎಲ್ಲಾ ಲಾಡ್ಜ್‌ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಬೇರೆಡೆಯಿಂದ ಬರುವ ವ್ಯಕ್ತಿಗಳ ಮಾಹಿತಿ ಪಡೆದು ಕೊಠಡಿ ಕೊಡುವಂತೆ ಲಾಡ್ಜ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಆಧಾರ್ ಕಾರ್ಡ್ ಅಥವ ಇನ್ನಿತರ ಗುರುತಿನ ಚೀಟಿ ಇಲ್ಲದೆ ರೂಮ್ ಕೊಡುವ ಲಾಡ್ಜ್‌ಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಲಾಡ್ಜ್‌ಗಳಲ್ಲಿ ಅಕ್ರಮವಾಗಿ ಉಳಿದುಕೊಂಡಿರುವವರ ಮೇಲೆ ನಿಗಾ ಇಟ್ಟಿದ್ದಾರೆ. ಹೊಸ ವರ್ಷದ ಹಿನ್ನಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

7 mins ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

14 mins ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

20 mins ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ: ಆರೋಗ್ಯ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…

23 mins ago

ಕೆಮಿಕಲ್‌ ಟ್ಯಾಂಕ್‌ ಸ್ಫೋಟ: ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು

ಮಂಡ್ಯ: ಕೆಮಿಕಲ್‌ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…

25 mins ago

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.…

26 mins ago