ಮೈಸೂರು

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಫುಟ್​​ಪಾತ್​​​ನಲ್ಲಿ ಹೀಲಿಯಂ ಬಲೂನ್​ ಮಾರುವ ವ್ಯಾಪಾರಿ ಸೈಕಲ್​​ನಲ್ಲಿ ವ್ಯಾಪಾರ ಮಾಡ್ತಿದ್ದ. ಈ ವೇಳೆ ಹೀಲಿಯಂ ಬಲೂನ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಪಕ್ಕದಲ್ಲೇ ಇದ್ದ ಬಲೂನ್ ವ್ಯಾಪಾರಿ ದೇಹ ಛಿದ್ರಛಿದ್ರವಾಗಿದೆ.

ಇನ್ನು ಸ್ಥಳದಲ್ಲೇ ನಿಂತಿದ್ದ ಐದು ಮಂದಿ ಗಾಯಗೊಂಡಿದ್ದಾರೆ. ಕ್ರಿಸ್​ಮಸ್ ರಜೆ ಹಿನ್ನೆಲೆಯಲ್ಲಿ ಮೈಸೂರು ಅರಮನೆ ವೀಕ್ಷಣೆಗೆ ಹೆಚ್ಚು ಜನ ಆಗಮಿಸಿದ್ರು. ಈ ವೇಳೆಯೆ ಈ ದುರ್ಘಟನೆ ನಡೆದಿದೆ.

ಇದನ್ನು ಓದಿ: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುರುತು ಪತ್ತೆ ಹಚ್ಚಿದ್ದಾರೆ.

ಗುರುತು ಪತ್ತೆ
ಹೀಲಿಯಂ ಸಿಲಿಂಡರ್​ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟ ಬಲೂನ್​ ವ್ಯಾಪಾರ 40 ವರ್ಷ ವಯಸ್ಸಿನ ಸಲೀಂ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ತೋಫಿಯಾ ಗ್ರಾಮದವರು ಎನ್ನಲಾಗಿದೆ. ಈತನ ವಿರುದ್ಧ ಇದೀಗ ಎಫ್​ಐಆರ್ ದಾಖಲಾಗಿದೆ.

ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಕೆ.ಆರ್.ಆಸ್ಪತ್ರೆ ಹಾಗೂ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಬೆಂಗಳೂರು ಮೂಲದ 45 ವರ್ಷದ ಲಕ್ಷ್ಮಿ ಎಂಬುವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ಲಕ್ಷ್ಮಿ ಮೈಸೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ನಂಜನಗೂಡು ಮೂಲದ ಮಂಜುಳಾ, ಕೊಲ್ಕತ್ತಾ ಮೂಲದ ಶಹನಾಜ್ ಶಬ್ಬೀರ್, ರಾಣೇಬೆನ್ನೂರು ಮೂಲದ ಕೊಟ್ರೇಶ್ ಗುಟ್ಟೆ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago