ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ತಿಳಿಸಿದರು.
ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನಗರದ ಜಿಎಲ್ವಿ ರಸ್ತೆಯ ಪಕ್ಕದಲ್ಲಿರುವ ಜಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಅರಸು ಪತ್ರಿಕೆಯ 12ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಉದ್ಘಾಟಿಸಿ ಮಾತನಾಡಿದ ಅವರು, ಮುದ್ರಣಾ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ತುಂಬಾ ಸ್ಪರ್ಧೆ ಇದೆ. ಮಾಧ್ಯಮಗಳನ್ನು ನಡೆಸುವುದು ತುಂಬಾ ಕಷ್ಟ ಇದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ದೇವರಾಜ ಅರಸು ಅವರು ತಮ್ಮ ಜೀವಮಾನದ ಪೂರ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತರು. ಅರಸು ಅವರು ಸಾಮಾನ್ಯ ಜನರು, ಬಡವರು, ದಲಿತರ ಸಬಲೀಕರಣಕ್ಕೆ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದರು. ಅರಸು ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗುತ್ತಿದ್ದಾರೆ ಎಂದು ತಿಳಿಸಿದರು.
ಎಚ್.ಎ.ವೆಂಕಟೇಶ್ ಮಾತನಾಡಿ, ಅತ್ಯಂತ ಹಿಂದುಳಿದ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು ವಿಧಾನ ಸಭೆಯನ್ನು ಪ್ರವೇಶಿಸಲು ಕಾರಣ ಕರ್ತರಾದರು. ದೇವರಾಜ ಅರಸು ಅವರ ಕಾರ್ಯಕ್ರಮಗಳನ್ನು ಜನರು ಮರೆಯುವುದಿಲ್ಲ ಹಾಗೆಯೇ ಅವರನ್ನು ಜನ ಮಾನಸದಿಂದ ಮರೆಮಾಚಲೂ ಸಾಧ್ಯವಿಲ್ಲ ಎಂದು ತಿಳಿಸಿದರು.
ಅರಸು ಅವರ ರಾಜಕೀಯ ವಿರೋಧಿಗಳು ಅವರನ್ನು ಸಾಕಾಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರಿದರು. ತುಂಬಾ ತೊಂದರೆ ಕೊಟ್ಟರು. ಆದರೆ ಅರಸು ಅವರನ್ನು ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ.
ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಟಿ.ಗುರುರಾಜ್, ರಮೇಶ್ ಸುರ್ವೆ, ಅಖಿಲ ಭಾರತ ಅಂಚೆ ನೌಕರರ ಸಂಘದ ಅಧ್ಯಕ್ಷ ಎನ್.ಕೃಷ್ಣ, ಯೋಗ ಶಿಕ್ಷಕರಾದ ಪ್ರೇಮಾ
ಕಂಠೀರವ ಸ್ಟುಡಿಯೋದ ಮಾಜಿ ಅಧ್ಯಕ್ಷರಾದ ವಿಜಯಲಕ್ಷ್ಮಿ ಅರಸ್, ಅನ್ವೇಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಆರ್ಯ ಅಮರ್ ನಾಥರಾಜೇ ಅರಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…