ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ತಿಳಿಸಿದರು.
ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ನಗರದ ಜಿಎಲ್ವಿ ರಸ್ತೆಯ ಪಕ್ಕದಲ್ಲಿರುವ ಜಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಅರಸು ಪತ್ರಿಕೆಯ 12ನೇ ವರ್ಷದ ವಾರ್ಷಿಕೋತ್ಸವ ಹಾಗೂ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಉದ್ಘಾಟಿಸಿ ಮಾತನಾಡಿದ ಅವರು, ಮುದ್ರಣಾ ಮತ್ತು ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ತುಂಬಾ ಸ್ಪರ್ಧೆ ಇದೆ. ಮಾಧ್ಯಮಗಳನ್ನು ನಡೆಸುವುದು ತುಂಬಾ ಕಷ್ಟ ಇದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ದೇವರಾಜ ಅರಸು ಅವರು ತಮ್ಮ ಜೀವಮಾನದ ಪೂರ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ನಿಂತರು. ಅರಸು ಅವರು ಸಾಮಾನ್ಯ ಜನರು, ಬಡವರು, ದಲಿತರ ಸಬಲೀಕರಣಕ್ಕೆ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದರು. ಅರಸು ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಗುತ್ತಿದ್ದಾರೆ ಎಂದು ತಿಳಿಸಿದರು.
ಎಚ್.ಎ.ವೆಂಕಟೇಶ್ ಮಾತನಾಡಿ, ಅತ್ಯಂತ ಹಿಂದುಳಿದ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು ವಿಧಾನ ಸಭೆಯನ್ನು ಪ್ರವೇಶಿಸಲು ಕಾರಣ ಕರ್ತರಾದರು. ದೇವರಾಜ ಅರಸು ಅವರ ಕಾರ್ಯಕ್ರಮಗಳನ್ನು ಜನರು ಮರೆಯುವುದಿಲ್ಲ ಹಾಗೆಯೇ ಅವರನ್ನು ಜನ ಮಾನಸದಿಂದ ಮರೆಮಾಚಲೂ ಸಾಧ್ಯವಿಲ್ಲ ಎಂದು ತಿಳಿಸಿದರು.
ಅರಸು ಅವರ ರಾಜಕೀಯ ವಿರೋಧಿಗಳು ಅವರನ್ನು ಸಾಕಾಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದು ದೂರಿದರು. ತುಂಬಾ ತೊಂದರೆ ಕೊಟ್ಟರು. ಆದರೆ ಅರಸು ಅವರನ್ನು ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ.
ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಟಿ.ಗುರುರಾಜ್, ರಮೇಶ್ ಸುರ್ವೆ, ಅಖಿಲ ಭಾರತ ಅಂಚೆ ನೌಕರರ ಸಂಘದ ಅಧ್ಯಕ್ಷ ಎನ್.ಕೃಷ್ಣ, ಯೋಗ ಶಿಕ್ಷಕರಾದ ಪ್ರೇಮಾ
ಕಂಠೀರವ ಸ್ಟುಡಿಯೋದ ಮಾಜಿ ಅಧ್ಯಕ್ಷರಾದ ವಿಜಯಲಕ್ಷ್ಮಿ ಅರಸ್, ಅನ್ವೇಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಆರ್ಯ ಅಮರ್ ನಾಥರಾಜೇ ಅರಸ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…