ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು.
ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್ ಪಕ್ಷದ ಇತಿಹಾಸ ಎಂದು ತಿಳಿಸಿದರು.
ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.
ವೀಡಿಯೋ ತುಣುಕು
ನೀವು ಕಾಂಗ್ರೆಸ್ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…