ಮೈಸೂರು : ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯ ತಿಳಿಸಿದರು.
ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್ ಪಕ್ಷದ ಇತಿಹಾಸ ಎಂದು ತಿಳಿಸಿದರು.
ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.
ವೀಡಿಯೋ ತುಣುಕು
ನೀವು ಕಾಂಗ್ರೆಸ್ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…