ಮೈಸೂರು

ಜೆಡಿಎಸ್‌ ಇತಿಹಾಸ ಹೇಳಿದ ಡಿ.ಕೆ.ಶಿವಕುಮಾರ್‌

ಮೈಸೂರು : ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಅಪ್ಪ-ಮಕ್ಕಳು ಬಿಡುವುದಿಲ್ಲ, ಕೇವಲ ಅವರ ಕುಟುಂಬ ಮಾತ್ರ ಅಧಿಕಾರ ಅನುಭವಿಸುತ್ತಾರೆ ಇದು ಜೆಡಿಎಸ್‌ ಇತಿಹಾಸ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಭಿಪ್ರಾಯ ತಿಳಿಸಿದರು.

ನಗರದ ಮಹಾರಾಜ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷದಲ್ಲಿ ಯಾವ ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಕೇವಲ ತಮ್ಮ ಕುಟುಂಬದವರ ಏಳಿಗೆಯನ್ನು ಮಾತ್ರ ನೋಡುತ್ತಾರೆ. ಇದು ಜೆಡಿಎಸ್‌ ಪಕ್ಷದ ಇತಿಹಾಸ ಎಂದು ತಿಳಿಸಿದರು.

ಇವರ ಈ ನಡವಳಿಕೆಯಿಂದಾಗಿ ಬೇಸರಗೊಂಡ ಅನೇಕ ಜೆಡಿಎಸ್‌ ನಾಯಕರು ಇಂದು ಅವರ ಪಕ್ಷ ತೊರೆದು ಬಂದಿದ್ದಾರೆ. ಇಂದು ಅವರೊಟ್ಟಿಗೆ ಯಾರೂ ಇಲ್ಲ. ಜೆಡಿಎಸ್‌ ಕೇವಲ ಅಪ್ಪ-ಮಕ್ಕಳ ಹಾಗೂ ಕುಟುಂಬದ ಪಕ್ಷ ಎಂದು ಆರೋಪಿಸಿದರು.

ವೀಡಿಯೋ ತುಣುಕು

ನೀವು ಕಾಂಗ್ರೆಸ್‌ ನಾಯಕರು ಹೇಳಿದ್ದನ್ನು ನಂಬಬೇಡಿ. ಒಂದು ಬಾರಿ ನೀವೆ ಈ ಹಿಂದೆ ಬಿಜೆಪಿ-ಜೆಡಿಎಸ್‌ ಪಕ್ಷದ ನಾಯರು ಮಾತನಾಡಿರುವುದನ್ನು ಒಮ್ಮೆ ನೋಡಿ ಎಂದು ತಮ್ಮ ಭಾಷಣಕ್ಕು ಮುನ್ನ ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಒಬ್ಬರನ್ನೊಬ್ಬರು ಅವಹೇಳನ ಮಾಡಿರುವ ವೀಡಿಯೋ ತುಣಕುಗಳ ಪ್ರದರ್ಶನ ಮಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago